Advertisement
ಸುದ್ದಿಗಳು

ಹಿಂದುತ್ವದ ಪರ ಬ್ಯಾಟಿಂಗ್ | ಕಂಗನಾಗೆ 40 ಕೋಟಿ ರೂಪಾಯಿ ನಷ್ಟ| ಬೇಸರ ಎಂದ ನಟಿ

Share

ಹಿಂದುತ್ವದ ಬಗ್ಗೆ ಮಾತನಾಡಿದ್ದಕ್ಕೆ ನಟಿ ಕಂಗನಾ ರಣಾವತ್ ಅವರಿಗೆ ಆದ ನಷ್ಟ ಬರೋಬ್ಬರಿ 30-40 ಕೋಟಿ ರೂಪಾಯಿ. ಹೀಗೇಕೆ ಎನ್ನುವ ವಿಚಾರದ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ನಟಿ ಕಂಗನಾ ರಣಾವತ್ ಅವರು ಎಲ್ಲಾ ವಿಷಯಗಳ ಬಗ್ಗೆ ಮಾತನಾಡುತ್ತಾರೆ. ಸಮಾಜದ ಆಗು-ಹೋಗುಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಇದರಿಂದ ಅವರು ಸಾಕಷ್ಟು ವಿವಾದ ಮಾಡಿಕೊಂಡಿದ್ದೂ ಇದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಂಡವರಲ್ಲ. ಈಗ ಕಂಗನಾ ರಾಣವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ಅವರು ಮಾತನಾಡಿದ ವಿಡಿಯೋ ಒಂದನ್ನು ಅವರು ಹಂಚಿಕೊಂಡಿದ್ದಾರೆ. ‘ನನಗೆ ಇಷ್ಟ ಬಂದಿದ್ದನ್ನು ನಾನು ಹೇಳುತ್ತೇನೆ. ಅದರಿಂದ ಹಣ ಕಳೆದುಕೊಂಡರೂ ತೊಂದರೆ ಇಲ್ಲ’ ಎಂದು ಎಲಾನ್ ಮಸ್ಕ್​ ಅವರು ಈ ವಿಡಿಯೋದಲ್ಲಿ ಹೇಳಿದ್ದರು. ಈ ಮಾತು ಕಂಗನಾಗೆ ಇಷ್ಟವಾಗಿದೆ. ಇದು ಅವರ ಜೀವನದಲ್ಲೂ ನಡೆದಿದೆ ಎನ್ನಲಾಗುತ್ತಿದೆ.

‘ನಾನು ಹಿಂದುತ್ವದ ಬಗ್ಗೆ, ರಾಜಕಾರಣಿಗಳು ಹಾಗೂ ದೇಶ ವಿರೋಧಿಗಳ ಬಗ್ಗೆ ಮಾತನಾಡಿದ್ದಕ್ಕೆ ನನಗೆ 30-40 ಕೋಟಿ ರೂಪಾಯಿ ನಷ್ಟ ಆಗಿದೆ. 20-25 ಬ್ರ್ಯಾಂಡ್​ಗಳು ತಮ್ಮ ಒಪ್ಪಂದವನ್ನು ರಾತ್ರೋರಾತ್ರಿ ರದ್ದು ಮಾಡಿಕೊಂಡವು’ ಎಂದಿದ್ದಾರೆ ಕಂಗನಾ.

‘ನಾನು ಸ್ವತಂತ್ರಳು. ನನಗೆ ಅನಿಸಿದ್ದನ್ನು ಹೇಳಲು ಯಾವುದೂ ಅಡ್ಡಿಯಾಗದು. ನಾನು ಎಲಾನ್ ಮಸ್ಕ್​ ಅವರನ್ನು ಈ ವಿಚಾರದಲ್ಲಿ ಪ್ರಶಂಸಿಸುತ್ತೇನೆ. ಏಕೆಂದರೆ ಎಲ್ಲರೂ ದೌರ್ಬಲ್ಯಗಳನ್ನು ಮಾತ್ರ ಪ್ರದರ್ಶಿಸುತ್ತಾರೆ. ಆದರೆ, ಎಲಾನ್ ಮಸ್ಕ್ ಆ ರೀತಿ ಅಲ್ಲ. ಶ್ರೀಮಂತನಾದವನು ಹಣಕ್ಕಾಗಿ ಕಾಳಜಿ ವಹಿಸಬಾರದು’ ಎಂದಿದ್ದಾರೆ.

ಟ್ವಿಟರ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಕಂಗನಾ ರಣಾವತ್ ಅವರ ಟ್ವಿಟರ್ ಖಾತೆಯ ಮೇಲೆ ನಿರ್ಬಂಧ ಹೇರಲಾಗಿತ್ತು. ಆದರೆ, ಎಲಾನ್ ಮಸ್ಕ್ ಅವರು ಟ್ವಿಟರ್​​ನ ಪಡೆದುಕೊಂಡಮೇಲೆ ಈ ಖಾತೆಯನ್ನು ಹಿಂದಿರುಗಿ ನೀಡಲಾಗಿದೆ. ಈ ಕಾರಣಕ್ಕೂ ಅವರಿಗೆ ಎಲಾನ್ ಮಸ್ಕ್​ ಮೇಲೆ ವಿಶೇಷ ಗೌರವ ಇದೆ.

ಸದ್ಯ ಕಂಗನಾ ರಣಾವತ್ ಅವರು ‘ಚಂದ್ರಮುಖಿ 2’ ಹಾಗೂ ‘ಎಮರ್ಜೆನ್ಸಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಎಮರ್ಜೆನ್ಸಿ’ ಚಿತ್ರಕ್ಕೆ ಕಂಗನಾ ರಣಾವತ್ ಅವರು ನಿರ್ದೇಶನ ಮಾಡುತ್ತಿದ್ದಾರೆ ಕೂಡ. ನಿರ್ಮಾಣದಲ್ಲೂ ಅವರ ಪಾಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

1 hour ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

10 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

11 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

13 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

15 hours ago