Advertisement
The Rural Mirror ಫಾಲೋಅಪ್

ಕಾಣಿಯೂರು ಕಾರು ಅಪಘಾತ | ಕಾರಿನಲ್ಲಿಯೂ ಇಲ್ಲ…. ಫೋನಿಗೂ ಸಿಗುತ್ತಿಲ್ಲ… | ಯುವಕರಿಗೆ ಶೋಧ ಆರಂಭ |

Share

ಕಾಣಿಯೂರು ಬಳಿ ಬೈತಡ್ಕದಲ್ಲಿ  ಸೇತುವೆಗೆ ಡಿಕ್ಕಿಯಾದ ಕಾರು ಹೊಳೆಗೆ ಬಿದ್ದಿತ್ತು. ಕಾರಿನಲ್ಲಿ ಇಬ್ಬರು ಯುವಕರು ಇದ್ದರು. ಭಾನುವಾರ ಬೆಳಗ್ಗೆ ಕಾರು ಬಿದ್ದಿರುವುದು  ಸಿಸಿಟಿವಿ ದೃಶ್ಯಾವಳಿಯ ಮೂಲಕ ಖಚಿತವಾಗಿತ್ತು. ಅದಾಗಿ ಶೋಧ ಕಾರ್ಯ ನಡೆಸಿ ಕಾರನ್ನು ಹರಸಾಹಸದಿಂದ ಹೊಳೆಯಿಂದ ಮೇಲೆ ತರಲಾಯಿತು. ಈಗ ಯುವಕರಿಗಾಗಿ ಶೋಧ ಕಾರ್ಯ ಆರಂಭವಾಗಿದೆ.  ಪೊಲೀಸರು ತನಿಖೆ ಆರಂಭಿಸಿದ್ದಾರೆ, ಹೊಳೆಯಲ್ಲೂ ಶೋಧ ಕಾರ್ಯ ಆರಂಭವಾಗಿದೆ.

ಶನಿವಾರ ತಡರಾತ್ರಿ ಕಾರು ಬೈತಡ್ಕ ಮಸೀದಿ ಬಳಿಯಲ್ಲಿ  ನೇರವಾಗಿ ಹೊಳೆಗೆ ಬೀಳುವ ದೃಶ್ಯದ ಮೂಲಕ ಕಾರು ಹೊಳೆಗೆ ಬಿದ್ದಿರುವುದು  ಖಚಿತವಾಗಿತ್ತು. ಹೀಗಾಗಿ ಶೋಧ ಕಾರ್ಯ ನಡೆದ ಬಳಿಕ ಘಟನಾ ಸ್ಥಳದಿಂದ ಸುಮಾರು 60 ಮೀಟರ್‌ ದೂರಲ್ಲಿ ಕಾರು (ಮಾರುತಿ 800) ಪತ್ತೆಯಾಗಿದೆ. ಹರಸಾಹಸದ ಮೂಲಕ ಕಾರನ್ನು  ಸವಣೂರಿನ ಚಾಲಕರು ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳ ನೆರವಿನಿಂದ  ಮೇಲೆ ತೆಗೆಯಲಾಗಿದೆ. ಯುವಕರ ಪತ್ತೆ ಕಾರ್ಯ ಆರಂಭವಾಗಿದೆ.

ಆದರೆ ಯುವಕರು ಕಾರಿನಿಂದ ಜಿಗಿದರೇ ಅಥವಾ ಹೊಳೆಯಿಂದ ದಾಟಿ ಬಂದರೇ ಅಥವಾ ಹೊಳೆಯಲ್ಲಿ ಕೊಚ್ಚಿ ಹೋದರೇ ಈ ಪ್ರಶ್ನೆಗಳ ಆಧಾರದಲ್ಲಿ ಈಗ ತನಿಖೆ ಆರಂಭವಾಗಿದೆ. ಕಾರಿನಲ್ಲಿ ಇಬ್ಬರು ಯುವಕರು ಇದ್ದದ್ದು  ಖಚಿತವಾಗಿದೆ. ಪುತ್ತೂರು-ಕಾಣಿಯೂರು ರಸ್ತೆ ನಡುವೆ ಸವಣೂರು ಹಾಗೂ ಕಾಣಿಯೂರು ಪ್ರದೇಶದಲ್ಲಿ ಪೊಲೀಸರು ರಾತ್ರಿ ವೇಳೆ ವಾಹನ ತಪಾಸಣೆ ಮಾಡುತ್ತಾರೆ. ಈ ಸಮಯದಲ್ಲಿ ವಾಹನಗಳ ಸಂಖ್ಯೆ ಹಾಗೂ ಮೊಬೈಲ್‌ ಸಂಖ್ಯೆ ಪಡೆಯುತ್ತಾರೆ. ರಾತ್ರಿ ವೇಳೆ ಈ ಯುವಕರು ಸಾಗುತ್ತಿದ್ದ ಕಾರಿನ ಸಂಖ್ಯೆ ಹಾಗೂ ಕಾರಿನ ಚಾಲಕನ ಸಂಖ್ಯೆಯನ್ನೂ ಪಡೆದಿದ್ದಾರೆ ಎಂದು ತಿಳಿದುಬಂದಿದೆ.  ಕಾರಿನಲ್ಲಿದ್ದ ವಿಟ್ಲ ಕುಂಡಡ್ಕದ ಧನುಷ್ (26) ಮತ್ತು ಮಂಜೇಶ್ವರ ನಿವಾಸಿ ಧನುಷ್ (21) ಇಬ್ಬರೂ ಸೋದರಸಂಬಂಧಿ ಎನ್ನಲಾಗಿದೆ. ವಿಟ್ಲದಿಂದ ಹೊರಟಿದ್ದ ಕಾರು ಗುತ್ತಿಗಾರಿನ ಸಂಬಂಧಿಕರ ಮನೆಗೆ ಬರುತ್ತಿತ್ತು. ತಡರಾತ್ರಿ ನಿದ್ರೆಯ ಮಂಪರಿನಲ್ಲಿದ್ದರೇ ಯುವಕರು ಎಂಬುದು  ಸಂದೇಹಕ್ಕೆ ಕಾರಣವಾಗಿದೆ. ಸದ್ಯ ಇಬ್ಬರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ.

ಅಪಘಾತವು ಸುಮಾರು 12.30 ರ ಆಸುಪಾಸಿನಲ್ಲಿ ನಡೆದಿದೆ. ಅದಾದ ಬಳಿಕ ಈ ಯುವಕರ ಮೊಬೈಲ್‌ ಬಳಕೆಯಾಗಿದೆ ಎಂಬುದು ಸದ್ಯದ ಮಾಹಿತಿ. ತಡರಾತ್ರಿ ಮನೆಗೂ ಕರೆ ಮಾಡಿದ್ದಾರೆ ಎಂಬುದು  ಮನೆಯವರ ಮಾಹಿತಿ. ಹಾಗಾದರೆ ಈ ಇಬ್ಬರು ಯುವಕರ ಮೊಬೈಲ್‌ ಏನಾಗಿದೆ?. ಹೊಳೆ ದಾಟಿದರೆ ? ಈಜಿ ಬಂದರೇ ? ಎಂಬುದು ತನಿಖೆಯ ದಾರಿಗಳು. ಹೀಗಾಗಿ ಮೊಬೈಲ್‌ ಟವರ್‌ ಲೊಕೇಶನ್‌ ಹಾಗೂ ಇತರ ಮಾಹಿತಿಗಳ ಮೂಲಕ ತನಿಖೆ ಆರಂಭಿಸಿದ್ದಾರೆ ಪೊಲೀಸರು. ಭಾರೀ ಮಳೆಯ ಕಾರಣದಿಂದ ರಸ್ತೆ ಬದಿ ಕಾಣದೆ ಸೇತುವೆಗೆ ಡಿಕ್ಕಿಯಾಯಿತೇ ? ಯುವಕರು ನಿದ್ರೆಯ ಮಂಪರಿನಲ್ಲಿದ್ದರೇ ?  ಈ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ. ಸದ್ಯ ಯುವಕರಿಗೆ ಶೋಧ ಕಾರ್ಯ ಆರಂಭವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

3 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

3 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

14 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

15 hours ago

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

21 hours ago