Advertisement
The Rural Mirror ಫಾಲೋಅಪ್

ಕಾಣಿಯೂರು ಕಾರು ಅಪಘಾತ | ಕಾರಿನಲ್ಲಿಯೂ ಇಲ್ಲ…. ಫೋನಿಗೂ ಸಿಗುತ್ತಿಲ್ಲ… | ಯುವಕರಿಗೆ ಶೋಧ ಆರಂಭ |

Share

ಕಾಣಿಯೂರು ಬಳಿ ಬೈತಡ್ಕದಲ್ಲಿ  ಸೇತುವೆಗೆ ಡಿಕ್ಕಿಯಾದ ಕಾರು ಹೊಳೆಗೆ ಬಿದ್ದಿತ್ತು. ಕಾರಿನಲ್ಲಿ ಇಬ್ಬರು ಯುವಕರು ಇದ್ದರು. ಭಾನುವಾರ ಬೆಳಗ್ಗೆ ಕಾರು ಬಿದ್ದಿರುವುದು  ಸಿಸಿಟಿವಿ ದೃಶ್ಯಾವಳಿಯ ಮೂಲಕ ಖಚಿತವಾಗಿತ್ತು. ಅದಾಗಿ ಶೋಧ ಕಾರ್ಯ ನಡೆಸಿ ಕಾರನ್ನು ಹರಸಾಹಸದಿಂದ ಹೊಳೆಯಿಂದ ಮೇಲೆ ತರಲಾಯಿತು. ಈಗ ಯುವಕರಿಗಾಗಿ ಶೋಧ ಕಾರ್ಯ ಆರಂಭವಾಗಿದೆ.  ಪೊಲೀಸರು ತನಿಖೆ ಆರಂಭಿಸಿದ್ದಾರೆ, ಹೊಳೆಯಲ್ಲೂ ಶೋಧ ಕಾರ್ಯ ಆರಂಭವಾಗಿದೆ.

ಶನಿವಾರ ತಡರಾತ್ರಿ ಕಾರು ಬೈತಡ್ಕ ಮಸೀದಿ ಬಳಿಯಲ್ಲಿ  ನೇರವಾಗಿ ಹೊಳೆಗೆ ಬೀಳುವ ದೃಶ್ಯದ ಮೂಲಕ ಕಾರು ಹೊಳೆಗೆ ಬಿದ್ದಿರುವುದು  ಖಚಿತವಾಗಿತ್ತು. ಹೀಗಾಗಿ ಶೋಧ ಕಾರ್ಯ ನಡೆದ ಬಳಿಕ ಘಟನಾ ಸ್ಥಳದಿಂದ ಸುಮಾರು 60 ಮೀಟರ್‌ ದೂರಲ್ಲಿ ಕಾರು (ಮಾರುತಿ 800) ಪತ್ತೆಯಾಗಿದೆ. ಹರಸಾಹಸದ ಮೂಲಕ ಕಾರನ್ನು  ಸವಣೂರಿನ ಚಾಲಕರು ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳ ನೆರವಿನಿಂದ  ಮೇಲೆ ತೆಗೆಯಲಾಗಿದೆ. ಯುವಕರ ಪತ್ತೆ ಕಾರ್ಯ ಆರಂಭವಾಗಿದೆ.

ಆದರೆ ಯುವಕರು ಕಾರಿನಿಂದ ಜಿಗಿದರೇ ಅಥವಾ ಹೊಳೆಯಿಂದ ದಾಟಿ ಬಂದರೇ ಅಥವಾ ಹೊಳೆಯಲ್ಲಿ ಕೊಚ್ಚಿ ಹೋದರೇ ಈ ಪ್ರಶ್ನೆಗಳ ಆಧಾರದಲ್ಲಿ ಈಗ ತನಿಖೆ ಆರಂಭವಾಗಿದೆ. ಕಾರಿನಲ್ಲಿ ಇಬ್ಬರು ಯುವಕರು ಇದ್ದದ್ದು  ಖಚಿತವಾಗಿದೆ. ಪುತ್ತೂರು-ಕಾಣಿಯೂರು ರಸ್ತೆ ನಡುವೆ ಸವಣೂರು ಹಾಗೂ ಕಾಣಿಯೂರು ಪ್ರದೇಶದಲ್ಲಿ ಪೊಲೀಸರು ರಾತ್ರಿ ವೇಳೆ ವಾಹನ ತಪಾಸಣೆ ಮಾಡುತ್ತಾರೆ. ಈ ಸಮಯದಲ್ಲಿ ವಾಹನಗಳ ಸಂಖ್ಯೆ ಹಾಗೂ ಮೊಬೈಲ್‌ ಸಂಖ್ಯೆ ಪಡೆಯುತ್ತಾರೆ. ರಾತ್ರಿ ವೇಳೆ ಈ ಯುವಕರು ಸಾಗುತ್ತಿದ್ದ ಕಾರಿನ ಸಂಖ್ಯೆ ಹಾಗೂ ಕಾರಿನ ಚಾಲಕನ ಸಂಖ್ಯೆಯನ್ನೂ ಪಡೆದಿದ್ದಾರೆ ಎಂದು ತಿಳಿದುಬಂದಿದೆ.  ಕಾರಿನಲ್ಲಿದ್ದ ವಿಟ್ಲ ಕುಂಡಡ್ಕದ ಧನುಷ್ (26) ಮತ್ತು ಮಂಜೇಶ್ವರ ನಿವಾಸಿ ಧನುಷ್ (21) ಇಬ್ಬರೂ ಸೋದರಸಂಬಂಧಿ ಎನ್ನಲಾಗಿದೆ. ವಿಟ್ಲದಿಂದ ಹೊರಟಿದ್ದ ಕಾರು ಗುತ್ತಿಗಾರಿನ ಸಂಬಂಧಿಕರ ಮನೆಗೆ ಬರುತ್ತಿತ್ತು. ತಡರಾತ್ರಿ ನಿದ್ರೆಯ ಮಂಪರಿನಲ್ಲಿದ್ದರೇ ಯುವಕರು ಎಂಬುದು  ಸಂದೇಹಕ್ಕೆ ಕಾರಣವಾಗಿದೆ. ಸದ್ಯ ಇಬ್ಬರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ.

ಅಪಘಾತವು ಸುಮಾರು 12.30 ರ ಆಸುಪಾಸಿನಲ್ಲಿ ನಡೆದಿದೆ. ಅದಾದ ಬಳಿಕ ಈ ಯುವಕರ ಮೊಬೈಲ್‌ ಬಳಕೆಯಾಗಿದೆ ಎಂಬುದು ಸದ್ಯದ ಮಾಹಿತಿ. ತಡರಾತ್ರಿ ಮನೆಗೂ ಕರೆ ಮಾಡಿದ್ದಾರೆ ಎಂಬುದು  ಮನೆಯವರ ಮಾಹಿತಿ. ಹಾಗಾದರೆ ಈ ಇಬ್ಬರು ಯುವಕರ ಮೊಬೈಲ್‌ ಏನಾಗಿದೆ?. ಹೊಳೆ ದಾಟಿದರೆ ? ಈಜಿ ಬಂದರೇ ? ಎಂಬುದು ತನಿಖೆಯ ದಾರಿಗಳು. ಹೀಗಾಗಿ ಮೊಬೈಲ್‌ ಟವರ್‌ ಲೊಕೇಶನ್‌ ಹಾಗೂ ಇತರ ಮಾಹಿತಿಗಳ ಮೂಲಕ ತನಿಖೆ ಆರಂಭಿಸಿದ್ದಾರೆ ಪೊಲೀಸರು. ಭಾರೀ ಮಳೆಯ ಕಾರಣದಿಂದ ರಸ್ತೆ ಬದಿ ಕಾಣದೆ ಸೇತುವೆಗೆ ಡಿಕ್ಕಿಯಾಯಿತೇ ? ಯುವಕರು ನಿದ್ರೆಯ ಮಂಪರಿನಲ್ಲಿದ್ದರೇ ?  ಈ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ. ಸದ್ಯ ಯುವಕರಿಗೆ ಶೋಧ ಕಾರ್ಯ ಆರಂಭವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

10 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

11 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

21 hours ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago