ರಾಜ್ಯ

ಬೈತಡ್ಕ ಕಾರು ಹೊಳೆಗೆ ಬಿದ್ದ ಪ್ರಕರಣ | ತಪ್ಪು ಮಾಹಿತಿ ನೀಡಿರುವುದೇಕೆ… ? | ಸಮಗ್ರ ತನಿಖೆಗೆ ಎಸ್‌ಡಿಪಿಐ ಆಗ್ರಹ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಶನಿವಾರ ರಾತ್ರಿ ವೇಳೆಯಲ್ಲಿ ಕಾರು ಹೊಳೆಗೆ ಬಿದ್ದ ಪ್ರಕರಣವು ಸಾರ್ವಜನಿಕವಾಗಿ ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ, ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕೆಂದು ಎಸ್‌ಡಿಪಿಐ ಸವಣೂರು ಬ್ಲಾಕ್ ಅಧ್ಯಕ್ಷರಾದ ಯೂಸುಫ್ ಹಾಜಿ ಬೇರಿಕೆ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Advertisement

ಶನಿವಾರ ರಾತ್ರಿ 12 ಗಂಟೆಯ ಸಮಯದಲ್ಲಿ ವಿಟ್ಲ ಮೂಲದ ಮಾರುತಿ ಕಾರೊಂದು ಅತೀ ವೇಗದ ಚಾಲನೆಯಿಂದ ಬೈತಡ್ಕ ಮಸೀದಿ ಸಮೀಪದ ಹೊಳೆಗೆ ಬಿದ್ದಿರುವುದು ಸಿಸಿ ಕ್ಯಾಮಾರ ಮೂಲಕ ತಿಳಿದಿದೆ. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸಂಶಯಗಳು ಸಾರ್ವಜನಿಕರಲ್ಲಿ ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಕಾರಿನಲ್ಲಿದ್ದ ಧನುಷ್ ತನ್ನ ಮನೆಯವರಿಗೆ ಕರೆ ಮಾಡಿ ತಾವೂ ಆಲಂಕಾರಿನಲ್ಲಿದ್ದೇವೆಂದು, ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿರುವುದಾಗಿ ಕುಟುಂಬಸ್ಥರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅದೇ ರೀತಿ ಸವಣೂರು ಚೆಕ್ ಪೋಸ್ಟ್ ನಲ್ಲಿ ಪೋಲೀಸರೊಂದಿಗೆ ಕೂಡ ಗುತ್ತಿಗಾರಿಗೆ ಹೋಗುವುದೆಂದು ಹಾಗೂ ಮೊಬೈಲ್ ಸಂಖ್ಯೆಯನ್ನು ತಪ್ಪಾಗಿ ಕೊಟ್ಟು ಅಸ್ಪಷ್ಟ ಮಾಹಿತಿ ನೀಡಿದ್ದಾರೆ. ಗುತ್ತಿಗಾರಿಗೆ ಹೋಗುವುದಾದರೆ ಪುತ್ತೂರು-ಜಾಲ್ಸೂರು ಮಾರ್ಗ ಹತ್ತಿರದ ರಸ್ತೆ ಆಗಿರುವಾಗ ಈ ಮಾರ್ಗವಾಗಿ ಬರುವ ಅಗತ್ಯವೇನಿತ್ತು?
ಅದೇ ರೀತಿ ಮನೆಯವರ ಬಳಿ ಅಪಘಾತವಾಗಿದೆ ಎಂದು ಸುಳ್ಳು ಹೇಳಿರುವುದು ಯಾಕೆ? ತಡರಾತ್ರಿಯಲ್ಲಿ ಅಂತಹ ಅನಿವಾರ್ಯ ಕೆಲಸವಾದರೂ ಏನು ?  ಅಥವಾ ಬೇರೇನಾದರು ಸಮಾಜಘಾತುಕ ಕೆಲಸಕ್ಕೆ ಬಂದವರೇ? ಇಂತಹ ಹಲವಾರು ಸಂಶಯಗಳು ಜನರೆಡೆಯಲ್ಲಿ ಚರ್ಚೆಯ ವಿಷಯವಾಗಿದೆ. ಹಾಗಾಗಿ ಪೋಲೀಸ್ ಇಲಾಖೆ ಈ ಪ್ರಕರಣವನ್ನು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಈ ಘಟನೆಯ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕೆಂದು   ಆಗ್ರಹಿಸಿದ್ದಾರೆ. ಹಾಗೂ ನಾಪತ್ತೆಯಾಗಿರುವ ಯುವಕರು ಆದಷ್ಟು ಬೇಗ ಪತ್ತೆಯಾಗಿ ಪ್ರಕರಣವು ಸುಖಾಂತ್ಯವಾಗಲಿ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲೂ ಚೆಸ್‌ ಪ್ರತಿಭೆಗಳಿದ್ದಾರೆ | ಗ್ರಾಮೀಣ ಭಾಗದಲ್ಲೂ ಚೆಸ್‌ ಬೆಳೆಯಬೇಕು |”ಚೆಸ್‌ ಇನ್‌ ಸ್ಕೂಲ್”‌ ಆರಂಭವಾಗಲಿ |

ಪ್ರತೀ ಮಗುವಿಗೂ ಚೆಸ್‌ ಲಭ್ಯವಾಗಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಚೆಸ್‌ ತರಬೇತಿ…

3 minutes ago

ಹವಾಮಾನ ವರದಿ | 20-07-2025 | ಮತ್ತೆ ಬದಲಾಯಿತು ಹವಾಮಾನ | ಮಳೆ ಕಡಿಮೆಯಾಗುವ ಲಕ್ಷಣ |

ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ…

7 hours ago

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

14 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

14 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

1 day ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

1 day ago