Advertisement
ರಾಜ್ಯ

ಬೈತಡ್ಕ ಕಾರು ಹೊಳೆಗೆ ಬಿದ್ದ ಪ್ರಕರಣ | ತಪ್ಪು ಮಾಹಿತಿ ನೀಡಿರುವುದೇಕೆ… ? | ಸಮಗ್ರ ತನಿಖೆಗೆ ಎಸ್‌ಡಿಪಿಐ ಆಗ್ರಹ |

Share

ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಶನಿವಾರ ರಾತ್ರಿ ವೇಳೆಯಲ್ಲಿ ಕಾರು ಹೊಳೆಗೆ ಬಿದ್ದ ಪ್ರಕರಣವು ಸಾರ್ವಜನಿಕವಾಗಿ ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ, ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕೆಂದು ಎಸ್‌ಡಿಪಿಐ ಸವಣೂರು ಬ್ಲಾಕ್ ಅಧ್ಯಕ್ಷರಾದ ಯೂಸುಫ್ ಹಾಜಿ ಬೇರಿಕೆ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಶನಿವಾರ ರಾತ್ರಿ 12 ಗಂಟೆಯ ಸಮಯದಲ್ಲಿ ವಿಟ್ಲ ಮೂಲದ ಮಾರುತಿ ಕಾರೊಂದು ಅತೀ ವೇಗದ ಚಾಲನೆಯಿಂದ ಬೈತಡ್ಕ ಮಸೀದಿ ಸಮೀಪದ ಹೊಳೆಗೆ ಬಿದ್ದಿರುವುದು ಸಿಸಿ ಕ್ಯಾಮಾರ ಮೂಲಕ ತಿಳಿದಿದೆ. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸಂಶಯಗಳು ಸಾರ್ವಜನಿಕರಲ್ಲಿ ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಕಾರಿನಲ್ಲಿದ್ದ ಧನುಷ್ ತನ್ನ ಮನೆಯವರಿಗೆ ಕರೆ ಮಾಡಿ ತಾವೂ ಆಲಂಕಾರಿನಲ್ಲಿದ್ದೇವೆಂದು, ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿರುವುದಾಗಿ ಕುಟುಂಬಸ್ಥರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅದೇ ರೀತಿ ಸವಣೂರು ಚೆಕ್ ಪೋಸ್ಟ್ ನಲ್ಲಿ ಪೋಲೀಸರೊಂದಿಗೆ ಕೂಡ ಗುತ್ತಿಗಾರಿಗೆ ಹೋಗುವುದೆಂದು ಹಾಗೂ ಮೊಬೈಲ್ ಸಂಖ್ಯೆಯನ್ನು ತಪ್ಪಾಗಿ ಕೊಟ್ಟು ಅಸ್ಪಷ್ಟ ಮಾಹಿತಿ ನೀಡಿದ್ದಾರೆ. ಗುತ್ತಿಗಾರಿಗೆ ಹೋಗುವುದಾದರೆ ಪುತ್ತೂರು-ಜಾಲ್ಸೂರು ಮಾರ್ಗ ಹತ್ತಿರದ ರಸ್ತೆ ಆಗಿರುವಾಗ ಈ ಮಾರ್ಗವಾಗಿ ಬರುವ ಅಗತ್ಯವೇನಿತ್ತು?
ಅದೇ ರೀತಿ ಮನೆಯವರ ಬಳಿ ಅಪಘಾತವಾಗಿದೆ ಎಂದು ಸುಳ್ಳು ಹೇಳಿರುವುದು ಯಾಕೆ? ತಡರಾತ್ರಿಯಲ್ಲಿ ಅಂತಹ ಅನಿವಾರ್ಯ ಕೆಲಸವಾದರೂ ಏನು ?  ಅಥವಾ ಬೇರೇನಾದರು ಸಮಾಜಘಾತುಕ ಕೆಲಸಕ್ಕೆ ಬಂದವರೇ? ಇಂತಹ ಹಲವಾರು ಸಂಶಯಗಳು ಜನರೆಡೆಯಲ್ಲಿ ಚರ್ಚೆಯ ವಿಷಯವಾಗಿದೆ. ಹಾಗಾಗಿ ಪೋಲೀಸ್ ಇಲಾಖೆ ಈ ಪ್ರಕರಣವನ್ನು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಈ ಘಟನೆಯ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕೆಂದು   ಆಗ್ರಹಿಸಿದ್ದಾರೆ. ಹಾಗೂ ನಾಪತ್ತೆಯಾಗಿರುವ ಯುವಕರು ಆದಷ್ಟು ಬೇಗ ಪತ್ತೆಯಾಗಿ ಪ್ರಕರಣವು ಸುಖಾಂತ್ಯವಾಗಲಿ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

17 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

18 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

19 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago