Advertisement
ರಾಜ್ಯ

ಬೈತಡ್ಕ ಕಾರು ಹೊಳೆಗೆ ಬಿದ್ದ ಪ್ರಕರಣ | ತಪ್ಪು ಮಾಹಿತಿ ನೀಡಿರುವುದೇಕೆ… ? | ಸಮಗ್ರ ತನಿಖೆಗೆ ಎಸ್‌ಡಿಪಿಐ ಆಗ್ರಹ |

Share

ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಶನಿವಾರ ರಾತ್ರಿ ವೇಳೆಯಲ್ಲಿ ಕಾರು ಹೊಳೆಗೆ ಬಿದ್ದ ಪ್ರಕರಣವು ಸಾರ್ವಜನಿಕವಾಗಿ ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ, ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕೆಂದು ಎಸ್‌ಡಿಪಿಐ ಸವಣೂರು ಬ್ಲಾಕ್ ಅಧ್ಯಕ್ಷರಾದ ಯೂಸುಫ್ ಹಾಜಿ ಬೇರಿಕೆ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಶನಿವಾರ ರಾತ್ರಿ 12 ಗಂಟೆಯ ಸಮಯದಲ್ಲಿ ವಿಟ್ಲ ಮೂಲದ ಮಾರುತಿ ಕಾರೊಂದು ಅತೀ ವೇಗದ ಚಾಲನೆಯಿಂದ ಬೈತಡ್ಕ ಮಸೀದಿ ಸಮೀಪದ ಹೊಳೆಗೆ ಬಿದ್ದಿರುವುದು ಸಿಸಿ ಕ್ಯಾಮಾರ ಮೂಲಕ ತಿಳಿದಿದೆ. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸಂಶಯಗಳು ಸಾರ್ವಜನಿಕರಲ್ಲಿ ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಕಾರಿನಲ್ಲಿದ್ದ ಧನುಷ್ ತನ್ನ ಮನೆಯವರಿಗೆ ಕರೆ ಮಾಡಿ ತಾವೂ ಆಲಂಕಾರಿನಲ್ಲಿದ್ದೇವೆಂದು, ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿರುವುದಾಗಿ ಕುಟುಂಬಸ್ಥರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅದೇ ರೀತಿ ಸವಣೂರು ಚೆಕ್ ಪೋಸ್ಟ್ ನಲ್ಲಿ ಪೋಲೀಸರೊಂದಿಗೆ ಕೂಡ ಗುತ್ತಿಗಾರಿಗೆ ಹೋಗುವುದೆಂದು ಹಾಗೂ ಮೊಬೈಲ್ ಸಂಖ್ಯೆಯನ್ನು ತಪ್ಪಾಗಿ ಕೊಟ್ಟು ಅಸ್ಪಷ್ಟ ಮಾಹಿತಿ ನೀಡಿದ್ದಾರೆ. ಗುತ್ತಿಗಾರಿಗೆ ಹೋಗುವುದಾದರೆ ಪುತ್ತೂರು-ಜಾಲ್ಸೂರು ಮಾರ್ಗ ಹತ್ತಿರದ ರಸ್ತೆ ಆಗಿರುವಾಗ ಈ ಮಾರ್ಗವಾಗಿ ಬರುವ ಅಗತ್ಯವೇನಿತ್ತು?
ಅದೇ ರೀತಿ ಮನೆಯವರ ಬಳಿ ಅಪಘಾತವಾಗಿದೆ ಎಂದು ಸುಳ್ಳು ಹೇಳಿರುವುದು ಯಾಕೆ? ತಡರಾತ್ರಿಯಲ್ಲಿ ಅಂತಹ ಅನಿವಾರ್ಯ ಕೆಲಸವಾದರೂ ಏನು ?  ಅಥವಾ ಬೇರೇನಾದರು ಸಮಾಜಘಾತುಕ ಕೆಲಸಕ್ಕೆ ಬಂದವರೇ? ಇಂತಹ ಹಲವಾರು ಸಂಶಯಗಳು ಜನರೆಡೆಯಲ್ಲಿ ಚರ್ಚೆಯ ವಿಷಯವಾಗಿದೆ. ಹಾಗಾಗಿ ಪೋಲೀಸ್ ಇಲಾಖೆ ಈ ಪ್ರಕರಣವನ್ನು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಈ ಘಟನೆಯ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕೆಂದು   ಆಗ್ರಹಿಸಿದ್ದಾರೆ. ಹಾಗೂ ನಾಪತ್ತೆಯಾಗಿರುವ ಯುವಕರು ಆದಷ್ಟು ಬೇಗ ಪತ್ತೆಯಾಗಿ ಪ್ರಕರಣವು ಸುಖಾಂತ್ಯವಾಗಲಿ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

31 minutes ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

14 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

14 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

15 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

23 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

23 hours ago