ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಸಮೀಪದ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಬೈತಡ್ಕದ ಹೊಳೆಯಲ್ಲಿ ಇನ್ನೊಂದು ಮೃತದೇಹವೂ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತದೇಹದ ಗುರುತು ಪತ್ತೆಯಾಗಬೇಕಿದೆ. ಎರಡೂ ಮೃತದೇಹವೂ ಸುಮಾರು 50 ಮೀಟರ್ ದೂರದಲ್ಲಿ ಕಂಡುಬಂದಿದೆ.ಅಧಿಕಾರಿಗಳು, ಇಲಾಖೆಯ ಸಿಬಂದಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಪ್ರಕರಣದಲ್ಲಿ ವಿಟ್ಲ ಮೂಲದ ಧನುಷ್ ಹಾಗೂ ಕನ್ಯಾನ – ಮಂಜೇಶ್ವರದ ಧನುಷ್ ನಾಪತ್ತೆಯಾಗಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಶನಿವಾರ ರಾತ್ರಿ ಕಾರು ಸೇತುವೆಯಿಂದ ಕೆಳಗೆ ಬಿದ್ದಿತ್ತು. ಭಾನುವಾರ ಕಾರು ಪತ್ತೆಯಾಗಿತ್ತು. ಆ ಬಳಿಕ ಇಬ್ಬರು ಯುವಕರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ನಂತರ ಯುವಕರಿಗಾಗಿ ಹುಡುಕಾಟ ಆರಂಭವಾಗಿತ್ತು. ಸೋಮವಾರ ಕೂಡಾ ಹೊಳೆಯಲ್ಲಿ ಹಾಗೂ ಇತರ ಕಡೆಗಳಲ್ಲೂ ಹುಡುಕಾಟ ನಡೆಸಲಾಗಿತ್ತು.
ಕಾಣಿಯೂರು ಬಳಿ ಬೈತಡ್ಕದ ಸೇತುವೆಯಿಂದ ಕೆಳಗೆ ಕಾರು ಹೊಳೆಗೆ ಬಿದ್ದ ಪ್ರಕರಣ| ಸೇತುವೆಯಿಂದ ಅನತಿ ದೂರದಲ್ಲಿ ಇನ್ನೊಂದು ಮೃತದೇಹ ಪತ್ತೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಪ್ರಕರಣದಲ್ಲಿ ವಿಟ್ಲ ಮೂಲದ ಧನುಷ್ ಹಾಗೂ ಮಂಜೇಶ್ವರ ಮೂಲದ ಧನುಷ್ ನಾಪತ್ತೆಯಾಗಿದ್ದರು. #ruralmirror pic.twitter.com/cDQQL4l2jj
— theruralmirror (@ruralmirror) July 12, 2022