ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಸಮೀಪದ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಬೈತಡ್ಕದ ಹೊಳೆಯಲ್ಲಿ ಇನ್ನೊಂದು ಮೃತದೇಹವೂ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತದೇಹದ ಗುರುತು ಪತ್ತೆಯಾಗಬೇಕಿದೆ. ಎರಡೂ ಮೃತದೇಹವೂ ಸುಮಾರು 50 ಮೀಟರ್ ದೂರದಲ್ಲಿ ಕಂಡುಬಂದಿದೆ.ಅಧಿಕಾರಿಗಳು, ಇಲಾಖೆಯ ಸಿಬಂದಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಪ್ರಕರಣದಲ್ಲಿ ವಿಟ್ಲ ಮೂಲದ ಧನುಷ್ ಹಾಗೂ ಕನ್ಯಾನ – ಮಂಜೇಶ್ವರದ ಧನುಷ್ ನಾಪತ್ತೆಯಾಗಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಶನಿವಾರ ರಾತ್ರಿ ಕಾರು ಸೇತುವೆಯಿಂದ ಕೆಳಗೆ ಬಿದ್ದಿತ್ತು. ಭಾನುವಾರ ಕಾರು ಪತ್ತೆಯಾಗಿತ್ತು. ಆ ಬಳಿಕ ಇಬ್ಬರು ಯುವಕರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ನಂತರ ಯುವಕರಿಗಾಗಿ ಹುಡುಕಾಟ ಆರಂಭವಾಗಿತ್ತು. ಸೋಮವಾರ ಕೂಡಾ ಹೊಳೆಯಲ್ಲಿ ಹಾಗೂ ಇತರ ಕಡೆಗಳಲ್ಲೂ ಹುಡುಕಾಟ ನಡೆಸಲಾಗಿತ್ತು.
ಜಮ್ಮು - ಕಾಶ್ಮೀರ ಸರ್ಕಾರ ಅಮರನಾಥ ಗುಹೆ ದೇಗುಲಕ್ಕೆ ಹೋಗುವ ಎಲ್ಲಾ ಮಾರ್ಗಗಳನ್ನು…
ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…
2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…