ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಸಮೀಪದ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಬೈತಡ್ಕದ ಹೊಳೆಯಲ್ಲಿ ಇನ್ನೊಂದು ಮೃತದೇಹವೂ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತದೇಹದ ಗುರುತು ಪತ್ತೆಯಾಗಬೇಕಿದೆ. ಎರಡೂ ಮೃತದೇಹವೂ ಸುಮಾರು 50 ಮೀಟರ್ ದೂರದಲ್ಲಿ ಕಂಡುಬಂದಿದೆ.ಅಧಿಕಾರಿಗಳು, ಇಲಾಖೆಯ ಸಿಬಂದಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಪ್ರಕರಣದಲ್ಲಿ ವಿಟ್ಲ ಮೂಲದ ಧನುಷ್ ಹಾಗೂ ಕನ್ಯಾನ – ಮಂಜೇಶ್ವರದ ಧನುಷ್ ನಾಪತ್ತೆಯಾಗಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಶನಿವಾರ ರಾತ್ರಿ ಕಾರು ಸೇತುವೆಯಿಂದ ಕೆಳಗೆ ಬಿದ್ದಿತ್ತು. ಭಾನುವಾರ ಕಾರು ಪತ್ತೆಯಾಗಿತ್ತು. ಆ ಬಳಿಕ ಇಬ್ಬರು ಯುವಕರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ನಂತರ ಯುವಕರಿಗಾಗಿ ಹುಡುಕಾಟ ಆರಂಭವಾಗಿತ್ತು. ಸೋಮವಾರ ಕೂಡಾ ಹೊಳೆಯಲ್ಲಿ ಹಾಗೂ ಇತರ ಕಡೆಗಳಲ್ಲೂ ಹುಡುಕಾಟ ನಡೆಸಲಾಗಿತ್ತು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…