ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಸಮೀಪದ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಬೈತಡ್ಕದ ಹೊಳೆಯಲ್ಲಿ ಇನ್ನೊಂದು ಮೃತದೇಹವೂ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತದೇಹದ ಗುರುತು ಪತ್ತೆಯಾಗಬೇಕಿದೆ. ಎರಡೂ ಮೃತದೇಹವೂ ಸುಮಾರು 50 ಮೀಟರ್ ದೂರದಲ್ಲಿ ಕಂಡುಬಂದಿದೆ.ಅಧಿಕಾರಿಗಳು, ಇಲಾಖೆಯ ಸಿಬಂದಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಪ್ರಕರಣದಲ್ಲಿ ವಿಟ್ಲ ಮೂಲದ ಧನುಷ್ ಹಾಗೂ ಕನ್ಯಾನ – ಮಂಜೇಶ್ವರದ ಧನುಷ್ ನಾಪತ್ತೆಯಾಗಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಶನಿವಾರ ರಾತ್ರಿ ಕಾರು ಸೇತುವೆಯಿಂದ ಕೆಳಗೆ ಬಿದ್ದಿತ್ತು. ಭಾನುವಾರ ಕಾರು ಪತ್ತೆಯಾಗಿತ್ತು. ಆ ಬಳಿಕ ಇಬ್ಬರು ಯುವಕರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ನಂತರ ಯುವಕರಿಗಾಗಿ ಹುಡುಕಾಟ ಆರಂಭವಾಗಿತ್ತು. ಸೋಮವಾರ ಕೂಡಾ ಹೊಳೆಯಲ್ಲಿ ಹಾಗೂ ಇತರ ಕಡೆಗಳಲ್ಲೂ ಹುಡುಕಾಟ ನಡೆಸಲಾಗಿತ್ತು.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…