ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಸಮೀಪದ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಬೈತಡ್ಕದ ಹೊಳೆಯಲ್ಲಿ ಇನ್ನೊಂದು ಮೃತದೇಹವೂ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತದೇಹದ ಗುರುತು ಪತ್ತೆಯಾಗಬೇಕಿದೆ. ಎರಡೂ ಮೃತದೇಹವೂ ಸುಮಾರು 50 ಮೀಟರ್ ದೂರದಲ್ಲಿ ಕಂಡುಬಂದಿದೆ.ಅಧಿಕಾರಿಗಳು, ಇಲಾಖೆಯ ಸಿಬಂದಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಪ್ರಕರಣದಲ್ಲಿ ವಿಟ್ಲ ಮೂಲದ ಧನುಷ್ ಹಾಗೂ ಕನ್ಯಾನ – ಮಂಜೇಶ್ವರದ ಧನುಷ್ ನಾಪತ್ತೆಯಾಗಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಶನಿವಾರ ರಾತ್ರಿ ಕಾರು ಸೇತುವೆಯಿಂದ ಕೆಳಗೆ ಬಿದ್ದಿತ್ತು. ಭಾನುವಾರ ಕಾರು ಪತ್ತೆಯಾಗಿತ್ತು. ಆ ಬಳಿಕ ಇಬ್ಬರು ಯುವಕರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ನಂತರ ಯುವಕರಿಗಾಗಿ ಹುಡುಕಾಟ ಆರಂಭವಾಗಿತ್ತು. ಸೋಮವಾರ ಕೂಡಾ ಹೊಳೆಯಲ್ಲಿ ಹಾಗೂ ಇತರ ಕಡೆಗಳಲ್ಲೂ ಹುಡುಕಾಟ ನಡೆಸಲಾಗಿತ್ತು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…