Advertisement
ಸುದ್ದಿಗಳು

ಕಾಣಿಯೂರು | ಜವುಳಿ ವ್ಯಾಪಾರಸ್ಥರ ಮೇಲೆ ಹಲ್ಲೆ – ದೂರು ದಾಖಲು |

Share

ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ಬೆಳ್ಳಾರೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.ದುಷ್ಕರ್ಮಿಗಳು ಹಲ್ಲೆ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರು ಕೂಡ ವೀಡಿಯೋ ವೀಕ್ಷಿಸಿದ ಬಳಿಕ ಎಫ್‌ಐಆರ್ ದಾಖಲಿಸಿದ್ದಾರೆ.

ಎಫ್‌ಐಆರ್ ನಲ್ಲಿ ಹಲ್ಲೆ ಮಾಡಿದರ ಹೆಸರು ನಮೂದಿಸಿಲ್ಲ. ಆದರೆ “ನೋಡಿದರೆ ಗುರುತಿಸಬಲ್ಲ ಗುಂಪಿನಲ್ಲಿದ್ದ ವ್ಯಕ್ತಿಗಳು” ಎಂದು ಬರೆಯಲಾಗಿದೆ. ಅಡ್ಡೂರು ಗ್ರಾಮದ ಹೊಳೆ ಬದಿ ನಿವಾಸಿ ರಮೀಝುದ್ದೀನ್ (29) ನೀಡಿದ ದೂರಿನನ್ವಯ ಎಫ್ ಐಆರ್ ದಾಖಲಾಗಿದೆ. ದೂರುದಾರ ರಮೀಝುದ್ದಿನ್ ಅವರು ತಮ್ಮ ಸಂಬಂಧಿಕ ಮುಹಮ್ಮದ್ ರಫೀಕ್ ಅವರೊಂದಿಗೆ ಬೆಡ್ ಶೀಟ್ ಮಾರಾಟಕ್ಕೆಂದು ಅ.20ರಂದು ಕಡಬ ತಾಲೂಕು ಎಡಮಂಗಲ ಹಾಗೂ ದೋಲ್ಪಾಡಿ ಗ್ರಾಮ ಪರಿಸರಕ್ಕೆ ಕಾರಿನಲ್ಲಿ ಹೋಗಿದ್ದಾರೆ. ಗ್ರಾಮದ ಮನೆಯೊಂದರದಲ್ಲಿದ್ದ ಮಹಿಳೆಯ ಜೊತೆ ಬೆಡ್ ಶೀಟ್ ಮಾರಾಟದ ವಿಚಾರದಲ್ಲಿ ತಕರಾರು ಉಂಟಾಗಿ ಅಲ್ಲಿಂದ ವಾಪಸ್ಸು ಕಾಣಿಯೂರು ಕಡೆಗೆ ತೆರಳಿದ್ದಾರೆ.

ಕಾಣಿಯೂರು ಗ್ರಾಮದ ಬೆದ್ರಾಜೆ ಎಂಬಲ್ಲಿಗೆ ಮಧ್ಯಾಹ್ನ 2 ಗಂಟೆಗೆ ತಲುಪಿದಾಗ ಅಲ್ಲಿ ಗುಂಪು ಸೇರಿದವರು ಪಿಕಪ್ ವಾಹನವೊಂದನ್ನು ರಸ್ತೆಗೆ ಅಡ್ಡವಾಗಿ ಇಟ್ಟು ಜವಳಿ ವ್ಯಾಪಾರಿಗಳು ಚಲಾಯಿಸುತ್ತಿದ್ದ ಕಾರನ್ನು ತಡೆದು ನಿಲ್ಲಿಸಿ ಅವರಿಬ್ಬರನ್ನೂ ಕಾರಿನಿಂದ ರಸ್ತೆಗೆ ಬೀಳಿಸಿ ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆ ಹಾಗೂ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದೆ. ಕಾಲಿನಿಂದ ತುಳಿದು ರಸ್ತೆಯಲ್ಲಿ ಎಳೆದಾಡಿ, ತರಚಿದ, ಗುದ್ದಿದ, ರಕ್ತ ಹೆಪ್ಪುಗಟ್ಟಿದ ಹಾಗು ರಕ್ತಗಾಯಗಳು ಉಂಟು ಮಾಡಿದ ಗುಂಪು, ಕಾರನ್ನು ಹುಡಿ ಮಾಡಿ ಜಖಂ ಗೊಳಿಸಿ ಸುಮಾರು 1.50.000 ಲಕ್ಷಗಳಷ್ಟು ನಷ್ಟ ಹಾಗೂ ಕಾರಿನಲ್ಲಿದ್ದ ಬೆಡ್ ಶೀಟ್ ಗಳನ್ನೂ ಬಿಸಾಡಿ ರೂ 25,000ನಷ್ಟವನ್ನುಂಟು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ನಡುವೆ ಹಲ್ಲೆ ನಡೆಸಿದವರನ್ನು ಭೇಟಿ ಮಾಡಿದ ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕ ಹಾಗೂ ಕಾಂಗ್ರೆಸ್‌ ಮುಖಂಡರು ಸ್ಥಳೀಯ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ತಂಡ ಎಂದು ಕಾಂಗ್ರೆಸ್‌ ಆರೋಪ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

4 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

4 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

4 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

5 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

17 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago