Advertisement
ಸುದ್ದಿಗಳು

ಕಾಣಿಯೂರು | ಜವುಳಿ ವ್ಯಾಪಾರಸ್ಥರ ಮೇಲೆ ಹಲ್ಲೆ – ದೂರು ದಾಖಲು |

Share

ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ಬೆಳ್ಳಾರೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.ದುಷ್ಕರ್ಮಿಗಳು ಹಲ್ಲೆ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರು ಕೂಡ ವೀಡಿಯೋ ವೀಕ್ಷಿಸಿದ ಬಳಿಕ ಎಫ್‌ಐಆರ್ ದಾಖಲಿಸಿದ್ದಾರೆ.

ಎಫ್‌ಐಆರ್ ನಲ್ಲಿ ಹಲ್ಲೆ ಮಾಡಿದರ ಹೆಸರು ನಮೂದಿಸಿಲ್ಲ. ಆದರೆ “ನೋಡಿದರೆ ಗುರುತಿಸಬಲ್ಲ ಗುಂಪಿನಲ್ಲಿದ್ದ ವ್ಯಕ್ತಿಗಳು” ಎಂದು ಬರೆಯಲಾಗಿದೆ. ಅಡ್ಡೂರು ಗ್ರಾಮದ ಹೊಳೆ ಬದಿ ನಿವಾಸಿ ರಮೀಝುದ್ದೀನ್ (29) ನೀಡಿದ ದೂರಿನನ್ವಯ ಎಫ್ ಐಆರ್ ದಾಖಲಾಗಿದೆ. ದೂರುದಾರ ರಮೀಝುದ್ದಿನ್ ಅವರು ತಮ್ಮ ಸಂಬಂಧಿಕ ಮುಹಮ್ಮದ್ ರಫೀಕ್ ಅವರೊಂದಿಗೆ ಬೆಡ್ ಶೀಟ್ ಮಾರಾಟಕ್ಕೆಂದು ಅ.20ರಂದು ಕಡಬ ತಾಲೂಕು ಎಡಮಂಗಲ ಹಾಗೂ ದೋಲ್ಪಾಡಿ ಗ್ರಾಮ ಪರಿಸರಕ್ಕೆ ಕಾರಿನಲ್ಲಿ ಹೋಗಿದ್ದಾರೆ. ಗ್ರಾಮದ ಮನೆಯೊಂದರದಲ್ಲಿದ್ದ ಮಹಿಳೆಯ ಜೊತೆ ಬೆಡ್ ಶೀಟ್ ಮಾರಾಟದ ವಿಚಾರದಲ್ಲಿ ತಕರಾರು ಉಂಟಾಗಿ ಅಲ್ಲಿಂದ ವಾಪಸ್ಸು ಕಾಣಿಯೂರು ಕಡೆಗೆ ತೆರಳಿದ್ದಾರೆ.

ಕಾಣಿಯೂರು ಗ್ರಾಮದ ಬೆದ್ರಾಜೆ ಎಂಬಲ್ಲಿಗೆ ಮಧ್ಯಾಹ್ನ 2 ಗಂಟೆಗೆ ತಲುಪಿದಾಗ ಅಲ್ಲಿ ಗುಂಪು ಸೇರಿದವರು ಪಿಕಪ್ ವಾಹನವೊಂದನ್ನು ರಸ್ತೆಗೆ ಅಡ್ಡವಾಗಿ ಇಟ್ಟು ಜವಳಿ ವ್ಯಾಪಾರಿಗಳು ಚಲಾಯಿಸುತ್ತಿದ್ದ ಕಾರನ್ನು ತಡೆದು ನಿಲ್ಲಿಸಿ ಅವರಿಬ್ಬರನ್ನೂ ಕಾರಿನಿಂದ ರಸ್ತೆಗೆ ಬೀಳಿಸಿ ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆ ಹಾಗೂ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದೆ. ಕಾಲಿನಿಂದ ತುಳಿದು ರಸ್ತೆಯಲ್ಲಿ ಎಳೆದಾಡಿ, ತರಚಿದ, ಗುದ್ದಿದ, ರಕ್ತ ಹೆಪ್ಪುಗಟ್ಟಿದ ಹಾಗು ರಕ್ತಗಾಯಗಳು ಉಂಟು ಮಾಡಿದ ಗುಂಪು, ಕಾರನ್ನು ಹುಡಿ ಮಾಡಿ ಜಖಂ ಗೊಳಿಸಿ ಸುಮಾರು 1.50.000 ಲಕ್ಷಗಳಷ್ಟು ನಷ್ಟ ಹಾಗೂ ಕಾರಿನಲ್ಲಿದ್ದ ಬೆಡ್ ಶೀಟ್ ಗಳನ್ನೂ ಬಿಸಾಡಿ ರೂ 25,000ನಷ್ಟವನ್ನುಂಟು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ನಡುವೆ ಹಲ್ಲೆ ನಡೆಸಿದವರನ್ನು ಭೇಟಿ ಮಾಡಿದ ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕ ಹಾಗೂ ಕಾಂಗ್ರೆಸ್‌ ಮುಖಂಡರು ಸ್ಥಳೀಯ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ತಂಡ ಎಂದು ಕಾಂಗ್ರೆಸ್‌ ಆರೋಪ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

2 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

2 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

15 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

16 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

16 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

21 hours ago