Advertisement
MIRROR FOCUS

ಬೀದರ್‌ನ ಕೃಷಿ ಸಂಶೋಧನಾ ಕೇಂದ್ರದಲ್ಲಿ ಕನ್ನಡ ಕೃಷಿ ಡಿಪ್ಲೊಮಾ ಕೋರ್ಸ್‌ ಬಂದ್‌ | ವಿದ್ಯಾರ್ಥಿಗಳ ಆಕ್ರೋಶ

Share

ರೈತರ(Farmer) ಮಕ್ಕಳು(Children) ಕೃಷಿ(Agriculture) ಬೇಡ ಅಂತ ಪಟ್ಟಣದ ದಾರಿ ಹಿಡಿತಿದ್ದಾರೆ. ಈ ಮಧ್ಯೆ ಕೆಲವೊಂದು ವಿದ್ಯಾರ್ಥಿಗಳು ಕೃಷಿ ವಿಜ್ಞಾನ(Agriculture science) , ಅಥವಾ ಕೃಷಿ ಪರ ಕೋರ್ಸ್‌ಗಳನ್ನು(Agriculture courses) ತಕ್ಕ ಮಟ್ಟಿಗೆ ತೆಗೆದುಕೊಳ್ಳುವ ಮನಸ್ಸುಗಳನ್ನು ಮಾಡುತ್ತಿದ್ದಾರೆ. ಅದರ ಮಧ್ಯೆ ಬೀದರ್(Bidar) ತಾಲೂಕಿನ  ಜನವಾಡ ಸಮೀಪದ ಕೃಷಿ ಸಂಶೋಧನಾ ಕೇಂದ್ರದ(Agriculture research center) ಆವರಣದಲ್ಲಿ ನಡೆಯುತ್ತಿದ್ದ ಕನ್ನಡ ಕೃಷಿ ಡಿಪ್ಲೊಮಾ ಕೋರ್ಸ್‌ ಪ್ರಸಕ್ತ ವರ್ಷದಿಂದ ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ (Karnataka Govt) ನಿರ್ಧಾರ ಮಾಡಿದೆ.

ಈ ಭಾಗದ ರೈತರ ಮಕ್ಕಳಿಗೆ ಸಹಾಯವಾಗಲೆಂದು 2012ರಲ್ಲಿ ಸಂಶೋಧನಾ ಕೇಂದ್ರದ ಆವರಣದಲ್ಲಿ ಕೃಷಿ ಡಿಪ್ಲೊಮಾ ಕೋರ್ಸ್‌ (Bidar Agriculture Diploma Courses) ಆರಂಭಿಸಲಾಗಿತ್ತು. ಕೃಷಿ ವಿಜ್ಞಾನ ಕೇಂದ್ರ ರಾಯಚೂರು ಅಡಿಯಲ್ಲಿ ಎಸ್‌ಎಸ್‌ಎಲ್‌ಸಿ (SSLC) ಬಳಿಕ ವಿದ್ಯಾರ್ಥಿಗಳು ಎರಡು ವರ್ಷದ ಡಿಪ್ಲೊಮಾ ಕೋರ್ಸ್ ಮಾಡುತ್ತಿದ್ದರು. ಕಳೆದ ವರ್ಷವು ಎರಡು ತರಗತಿ ಸೇರಿ 90ಕ್ಕೂ ಅಧಿಕ ವಿದ್ಯಾರ್ಥಿಗಳು ಡಿಪ್ಲೊಮಾ ಪದವಿ ಓದಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಆರಾಧ್ಯ ಜಾದವ್ ಪ್ರತಿಕ್ರಿಯಿಸಿ, ಕೋಟ್ಯಂತರ ರೂ. ಖರ್ಚುಮಾಡಿ ಕೃಷಿ ವಿದ್ಯಾಲಯವನ್ನು ಸ್ಥಾಪಿಸಲಾಗಿದೆ. 2 ವರ್ಷದ ಡಿಪ್ಲೊಮಾದಿಂದಾಗಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆ ಬೀಳುವುದಿಲ್ಲ. ಸರ್ಕಾರ ಕೃಷಿ ಡಿಪ್ಲೊಮಾ ಕಾಲೇಜು ಬಂದ್ ಮಾಡಿದ್ದರಿಂದ ಎಲ್ಲಾ ಉಪಕರಣಗಳು ತುಕ್ಕು ಹಿಡಿಯುತ್ತಿದ್ದು ಕ್ಲಾಸ್‌ಗಳು ಧೂಳು ತಿನ್ನುತ್ತಿವೆ. 12 ವರ್ಷದಿಂದ ನಡೆಯುತ್ತಿದ್ದ ತರಗತಿಗಳು ಬಂದಾಗಿದ್ದು ಗ್ರಾಮೀಣ ಭಾಗದ ಮಕ್ಕಳಿಗೆ ಭಾರೀ ನಷ್ಟವಾಗಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಗಮನಿಸಿ ಕೃಷಿ ಡಿಪ್ಲೊಮಾ ಪ್ರಾರಂಭಕ್ಕೆ ಮುತುವರ್ಜಿ ವಹಿಸಬೇಕಿದೆ ಎಂದು ಮನವಿ ಮಾಡಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 hour ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

7 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

16 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

17 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

17 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago