ರೈತರ(Farmer) ಮಕ್ಕಳು(Children) ಕೃಷಿ(Agriculture) ಬೇಡ ಅಂತ ಪಟ್ಟಣದ ದಾರಿ ಹಿಡಿತಿದ್ದಾರೆ. ಈ ಮಧ್ಯೆ ಕೆಲವೊಂದು ವಿದ್ಯಾರ್ಥಿಗಳು ಕೃಷಿ ವಿಜ್ಞಾನ(Agriculture science) , ಅಥವಾ ಕೃಷಿ ಪರ ಕೋರ್ಸ್ಗಳನ್ನು(Agriculture courses) ತಕ್ಕ ಮಟ್ಟಿಗೆ ತೆಗೆದುಕೊಳ್ಳುವ ಮನಸ್ಸುಗಳನ್ನು ಮಾಡುತ್ತಿದ್ದಾರೆ. ಅದರ ಮಧ್ಯೆ ಬೀದರ್(Bidar) ತಾಲೂಕಿನ ಜನವಾಡ ಸಮೀಪದ ಕೃಷಿ ಸಂಶೋಧನಾ ಕೇಂದ್ರದ(Agriculture research center) ಆವರಣದಲ್ಲಿ ನಡೆಯುತ್ತಿದ್ದ ಕನ್ನಡ ಕೃಷಿ ಡಿಪ್ಲೊಮಾ ಕೋರ್ಸ್ ಪ್ರಸಕ್ತ ವರ್ಷದಿಂದ ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ (Karnataka Govt) ನಿರ್ಧಾರ ಮಾಡಿದೆ.
ಕಾಲೇಜಿನ ಪ್ರಾಂಶುಪಾಲರಾದ ಡಾ. ಆರಾಧ್ಯ ಜಾದವ್ ಪ್ರತಿಕ್ರಿಯಿಸಿ, ಕೋಟ್ಯಂತರ ರೂ. ಖರ್ಚುಮಾಡಿ ಕೃಷಿ ವಿದ್ಯಾಲಯವನ್ನು ಸ್ಥಾಪಿಸಲಾಗಿದೆ. 2 ವರ್ಷದ ಡಿಪ್ಲೊಮಾದಿಂದಾಗಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆ ಬೀಳುವುದಿಲ್ಲ. ಸರ್ಕಾರ ಕೃಷಿ ಡಿಪ್ಲೊಮಾ ಕಾಲೇಜು ಬಂದ್ ಮಾಡಿದ್ದರಿಂದ ಎಲ್ಲಾ ಉಪಕರಣಗಳು ತುಕ್ಕು ಹಿಡಿಯುತ್ತಿದ್ದು ಕ್ಲಾಸ್ಗಳು ಧೂಳು ತಿನ್ನುತ್ತಿವೆ. 12 ವರ್ಷದಿಂದ ನಡೆಯುತ್ತಿದ್ದ ತರಗತಿಗಳು ಬಂದಾಗಿದ್ದು ಗ್ರಾಮೀಣ ಭಾಗದ ಮಕ್ಕಳಿಗೆ ಭಾರೀ ನಷ್ಟವಾಗಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಗಮನಿಸಿ ಕೃಷಿ ಡಿಪ್ಲೊಮಾ ಪ್ರಾರಂಭಕ್ಕೆ ಮುತುವರ್ಜಿ ವಹಿಸಬೇಕಿದೆ ಎಂದು ಮನವಿ ಮಾಡಿದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…