ರೈತರ(Farmer) ಮಕ್ಕಳು(Children) ಕೃಷಿ(Agriculture) ಬೇಡ ಅಂತ ಪಟ್ಟಣದ ದಾರಿ ಹಿಡಿತಿದ್ದಾರೆ. ಈ ಮಧ್ಯೆ ಕೆಲವೊಂದು ವಿದ್ಯಾರ್ಥಿಗಳು ಕೃಷಿ ವಿಜ್ಞಾನ(Agriculture science) , ಅಥವಾ ಕೃಷಿ ಪರ ಕೋರ್ಸ್ಗಳನ್ನು(Agriculture courses) ತಕ್ಕ ಮಟ್ಟಿಗೆ ತೆಗೆದುಕೊಳ್ಳುವ ಮನಸ್ಸುಗಳನ್ನು ಮಾಡುತ್ತಿದ್ದಾರೆ. ಅದರ ಮಧ್ಯೆ ಬೀದರ್(Bidar) ತಾಲೂಕಿನ ಜನವಾಡ ಸಮೀಪದ ಕೃಷಿ ಸಂಶೋಧನಾ ಕೇಂದ್ರದ(Agriculture research center) ಆವರಣದಲ್ಲಿ ನಡೆಯುತ್ತಿದ್ದ ಕನ್ನಡ ಕೃಷಿ ಡಿಪ್ಲೊಮಾ ಕೋರ್ಸ್ ಪ್ರಸಕ್ತ ವರ್ಷದಿಂದ ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ (Karnataka Govt) ನಿರ್ಧಾರ ಮಾಡಿದೆ.
ಕಾಲೇಜಿನ ಪ್ರಾಂಶುಪಾಲರಾದ ಡಾ. ಆರಾಧ್ಯ ಜಾದವ್ ಪ್ರತಿಕ್ರಿಯಿಸಿ, ಕೋಟ್ಯಂತರ ರೂ. ಖರ್ಚುಮಾಡಿ ಕೃಷಿ ವಿದ್ಯಾಲಯವನ್ನು ಸ್ಥಾಪಿಸಲಾಗಿದೆ. 2 ವರ್ಷದ ಡಿಪ್ಲೊಮಾದಿಂದಾಗಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆ ಬೀಳುವುದಿಲ್ಲ. ಸರ್ಕಾರ ಕೃಷಿ ಡಿಪ್ಲೊಮಾ ಕಾಲೇಜು ಬಂದ್ ಮಾಡಿದ್ದರಿಂದ ಎಲ್ಲಾ ಉಪಕರಣಗಳು ತುಕ್ಕು ಹಿಡಿಯುತ್ತಿದ್ದು ಕ್ಲಾಸ್ಗಳು ಧೂಳು ತಿನ್ನುತ್ತಿವೆ. 12 ವರ್ಷದಿಂದ ನಡೆಯುತ್ತಿದ್ದ ತರಗತಿಗಳು ಬಂದಾಗಿದ್ದು ಗ್ರಾಮೀಣ ಭಾಗದ ಮಕ್ಕಳಿಗೆ ಭಾರೀ ನಷ್ಟವಾಗಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಗಮನಿಸಿ ಕೃಷಿ ಡಿಪ್ಲೊಮಾ ಪ್ರಾರಂಭಕ್ಕೆ ಮುತುವರ್ಜಿ ವಹಿಸಬೇಕಿದೆ ಎಂದು ಮನವಿ ಮಾಡಿದರು.
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…
ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…