ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದಲ್ಲಿ ಅನುಷ್ಠಾನ ಸಾಧ್ಯವಿಲ್ಲ : ಡಾ.ಪುರುಷೋತ್ತಮ ಬಿಳಿಮಲೆ

February 12, 2025
10:19 PM

ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದರೆ, ಆದೇಶಗಳಿಂದ ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರಾಧಿಕಾರದ ಮುಖ್ಯ ಕೆಲಸ ಸರ್ಕಾರವು ಕನ್ನಡಪರ ತೀರ್ಮಾನಗಳನ್ನು ತೆಗೆದುಕೊಂಡರೆ, ಅಂತಹ ತೀರ್ಮಾನಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು. ಈ ನಿಟ್ಟಿನಲ್ಲಿ ಸರ್ಕಾರವು 3000 ಕ್ಕೂ ಹೆಚ್ಚಿನ ಆದೇಶಗಳನ್ನು ಹೊರಡಿಸಿದೆ. ಗಡಿಪ್ರದೇಶದ ಶಾಲೆಗಳು ಹೆಚ್ಚಾಗಿ ಕನ್ನಡೀಕರಣ ಗೊಳಿಸಬೇಕು ಮತ್ತು ಹೊರಗಿನಿಂದ ಬರುವವರನ್ನು ಕನ್ನಡಿಗರೊಂದಿಗೆ ವ್ಯವಹಾರ ಮಾಡುವಾಗ ಅವರನ್ನು ಕನ್ನಡದಲ್ಲಿಯೇ ಮಾತನಾಡಿ ಅವರಿಗೆ ಕನ್ನಡ ಭಾಷೆಯನ್ನು ಕಲಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದರು. ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬೀದರ್, ಗುಲ್ಬರ್ಗ, ರಾಯಚೂರು, ಶಿವಮೊಗ್ಗ ಹಾಗೂ ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು. 80 ರ ದಶಕದಿಂದಲೂ ಕನ್ನಡ ಅನುಷ್ಠಾನಕ್ಕೆ ಸಂಬಂದಿಸಿದಂತೆ ಕನ್ನಡಪರ ಸಂಘಟನೆಗಳ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror