ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದರೆ, ಆದೇಶಗಳಿಂದ ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರಾಧಿಕಾರದ ಮುಖ್ಯ ಕೆಲಸ ಸರ್ಕಾರವು ಕನ್ನಡಪರ ತೀರ್ಮಾನಗಳನ್ನು ತೆಗೆದುಕೊಂಡರೆ, ಅಂತಹ ತೀರ್ಮಾನಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು. ಈ ನಿಟ್ಟಿನಲ್ಲಿ ಸರ್ಕಾರವು 3000 ಕ್ಕೂ ಹೆಚ್ಚಿನ ಆದೇಶಗಳನ್ನು ಹೊರಡಿಸಿದೆ. ಗಡಿಪ್ರದೇಶದ ಶಾಲೆಗಳು ಹೆಚ್ಚಾಗಿ ಕನ್ನಡೀಕರಣ ಗೊಳಿಸಬೇಕು ಮತ್ತು ಹೊರಗಿನಿಂದ ಬರುವವರನ್ನು ಕನ್ನಡಿಗರೊಂದಿಗೆ ವ್ಯವಹಾರ ಮಾಡುವಾಗ ಅವರನ್ನು ಕನ್ನಡದಲ್ಲಿಯೇ ಮಾತನಾಡಿ ಅವರಿಗೆ ಕನ್ನಡ ಭಾಷೆಯನ್ನು ಕಲಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದರು. ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬೀದರ್, ಗುಲ್ಬರ್ಗ, ರಾಯಚೂರು, ಶಿವಮೊಗ್ಗ ಹಾಗೂ ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು. 80 ರ ದಶಕದಿಂದಲೂ ಕನ್ನಡ ಅನುಷ್ಠಾನಕ್ಕೆ ಸಂಬಂದಿಸಿದಂತೆ ಕನ್ನಡಪರ ಸಂಘಟನೆಗಳ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…