Advertisement
ಸುದ್ದಿಗಳು

ಬಾಳ ಮಧ್ಯಾಹ್ನದ ಲಹರಿ

Share

ಓ ಮೊನ್ನೆ ಮೊನ್ನೆಯಷ್ಟೇ ಸಂದಿದೆ ಕೌಮಾರ್ಯ
ನಿನ್ನೆ ನಿನ್ನೆಯಷ್ಟೇ ದಾಟಿತಲ್ಲಾ ಯೌವ್ವನಕಾಲ
ಅದೋ ಸಲ್ಲುತ್ತಿದೆ ವಯಸ್ಸು ಮಧ್ಯ
ಬಾಕಿಯದು ಒಂದೇ ವೃದ್ಧಾಪ್ಯ
ಇಷ್ಟೇ ಇಹುದಲ್ಲಾ ಬದುಕೆಂಬ ಭಾಗ್ಯ
ಎಮ್ಮ ಬಿಡದಲ್ಲಾ ಆಸೆಯೆಂಬ ಪಾಶ
ಆದರದುವೇ ತಾನೇ ಬಾಳ ನಿರ್ದೇಶಕ

ಈ ಜಗದ ಚಿತ್ರದಲಿ ಬದುಕದೆಷ್ಟು ವಿಚಿತ್ರ
ಅನ್ನಿಸಿತಲ್ಲಾ ನಿನಗೂ ಅದು ಶ್ರೀರಾಮಚಂದ್ರ
ನಮಗೂ ಹಾಗನಿಸುವುದು ಮತ್ತೆ ಅದಾವ ಲೆಕ್ಕ ದಯಾಸಾಂದ್ರ
ನಿನ್ನಾವತಾರಕ್ಕೆ ಪಾರವುಂಟೇ ಶ್ರೀರಾಮ
ಎಮ್ಮ ತೊಳಲಾಟಕ್ಕೆ ಗತಿಮಿತಿಯುಂಟೇ ದೇವ
ಇನ್ನೆಷ್ಟು ಕಾಲ ಈ ಬದುಕ ಲೆಕ್ಕ
ಆರರಿತಿಹರು ಆ ಬೊಮ್ಮನ ಪಕ್ಕಾ ಲೆಕ್ಕ

ಬಾಳಬೆಳಗಿನಲಿ ನೋಡಲದೇನು ಬೆರಗು
ಮಧ್ಯಾಹ್ನದಲಿ ಅದೋ ಅದೇನು ಹಸಿವು
ಸಂಜೆಯದು ಎಂತಿಹುದೋ ಎಂಬ ಆತಂಕವು
ಕಾಡದಿರಲೆಂಬ ಸಂಪ್ರಾರ್ಥನೆಯು ಆ ದೇವನೆದುರು

ಬರಹ :
ಜಯಪ್ರಕಾಶ ಎ ನಾಕೂರು

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…

This reflective Kannada poem portrays the journey from youth to old age, reminding us that life passes quickly while desires continue to bind us. It reflects on destiny, human longing, and the search for peace, concluding that the true measure of life lies in its meaning, not its length.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

4 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

4 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

11 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

12 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago