Advertisement
The Rural Mirror ಫಾಲೋಅಪ್

#KarnatakaBandh | ನಾಳೆ ಕಾವೇರಿಗಾಗಿ ಬಂದ್ ಆಗಲಿದೆ ಕನ್ನಡನಾಡು : ಬಂದ್​ಗೆ ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡುತ್ತಿರುವ ಕನ್ನಡಪರ ಹೋರಾಟಗಾರು

Share

ಕಾವೇರಿಗಾಗಿ ಮಂಗಳವಾರ ಬೆಂಗಳೂರು ಹಾಗೂ ಕಾವೇರಿ ಜಲಾನಯನದ ಜಿಲ್ಲೆಗಳಲ್ಲಿ ಬಂದ್‌ ಆಚರಿಸಲಾಗಿತ್ತು. ಆದರೆ ಕಾವೇರಿ ನೀರು ಮಾತ್ರ ಇನ್ನು ತಮಿಳುನಾಡಿಗೆ ಹರಿಯುತ್ತಲೇ ಇದೆ. ಕನ್ನಡಿಗರ ಕಷ್ಟಕ್ಕೆ ಯಾರು ಸ್ಪಂದಿಸುವವರು ಯಾರು ಇಲ್ಲ ಅನ್ನಿಸುತ್ತದೆ. ರಾಜ್ಯದಲ್ಲಿ ಮಳೆಯ ಕೊರತೆ ಉಂಟಾಗಿದ್ರೂ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಯುತ್ತಿರೋದನ್ನು ಖಂಡಿಸಿ ಕನ್ನಡ ಪರ ಹೋರಾಟಗಾರರು ಕರ್ನಾಟಕ ಬಂದ್​ಗೆಕರೆ ಕೊಟ್ಟಿದ್ದಾರೆ.

ಈಗಾಗಲೇ ರಾಜ್ಯದ ತುಂಬೆಲ್ಲಾ ಕನ್ನಡಪರ ಹೋರಾಟಗಾರು ರಸ್ತೆಗೆ ಇಳಿದಿದ್ದು, ನಾಳೆಯ ಕರ್ನಾಟಕ ಬಂದ್​ಗೆ ಬೆಂಬಲಿಸುವಂತೆ ಜನರಲ್ಲಿ ಮನವಿ ಜೊತೆ ಜಾಗೃತಿಯನ್ನು ಮೂಡಿಸುತ್ತಿದ್ದಾರೆ. ನಾಳೆ ಅಂದ್ರೆ ಸೆಪ್ಟೆಂಬರ್ 29ರಂದು ಅಗತ್ಯ ಸೇವೆಗಳನ್ನ ಹೊರತುಪಡಿಸಿ ಬಹುತೇಕ ಎಲ್ಲಾ ಅಂಗಡಿ ಮುಂಗಟ್ಟು ಮತ್ತು ವ್ಯವಹಾರಗಳು ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ. ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರ್ನಾಟಕ ಬಂದ್ ಆಗಲಿದೆ ಎಂದು ಕನ್ನಡಪರ ಹೋರಾಟಗಾರು ಮಾಹಿತಿ ನೀಡಿದ್ದಾರೆ.

ಇನ್ನು ರಾಜಧಾನಿ ಈ ವಾರದಲ್ಲಿ ಎದುರಿಸುತ್ತಿರೋ ಎರಡನೇ ಬಂದ್ ಆಗಿದೆ. ಮಂಗಳವಾರ ರೈತಪರ ಸಂಘಟನೆಗಳಿಗೆ ಕರೆ ಕೊಟ್ಟಿದ್ದ ಬೆಂಗಳೂರು ಬಂದ್ ಭಾಗಶಃ ಯಶಸ್ವಿಯಾಗಿತ್ತು. ಶಾಲಾ-ಕಾಲೇಜುಗಳು ಬಂದ್ ಆಗಿದ್ದವು. ರಸ್ತೆಗೆ ಬಸ್​ಗಳು ಇಳಿದಿದ್ರೂ ಪ್ರಯಾಣಿಕರು ಇರಲಿಲ್ಲ. ಶುಕ್ರವಾರದ ಕರ್ನಾಟಕ ಬಂದ್​ಗೆ ರಾಜಧಾನಿಯ ಖಾಸಗಿ ಶಾಲೆಗಳು ನೈತಿಕ ಬೆಂಬಲ ನೀಡೋದಾಗಿ ಹೇಳಿವೆ. ರಾಜ್ಯದಲ್ಲಿ ಬಿಎಂಟಿಸಿ, ಕೆಎಸ್​​ಆರ್​ಟಿಸಿ ಬಸ್​ಗಳು ರಸ್ತೆಗಿಳಿಯುವ ಸಾಧ್ಯತೆಗಳೂ ಇವೆ. ಇಂದು ಸಂಜೆ ಎಲ್ಲವೂ ಅಧಿಕೃತವಾಗಲಿದೆ. ಸದ್ಯದ ಮಾಹಿತಿ ಪ್ರಕಾರ ನಾಳೆ ರಾಜ್ಯದಲ್ಲಿ ಏನಿರುತ್ತೆ? ಏನಿರಲ್ಲ ಎಂಬುದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ಏನಿರುತ್ತೆ?: ಅಗತ್ಯ ಸೇವೆಗಳಾದ ಹಾಲು, ದಿನ ಪತ್ರಿಕೆ, ವೈದ್ಯಕೀಯ ಸೇವೆಗಳು, ಮೆಡಿಕಲ್ ಶಾಪ್ ಇರಲಿದೆ. ಇನ್ನು KSRTC, BMTC ಸೇರಿದಂತೆ ಸಾರಿಗೆ ವ್ಯವಸ್ಥೆಯ ನಿರ್ಧಾರ ಇನ್ನೂ ಪ್ರಕಟವಾಗಿಲ್ಲ. ಖಾಸಗಿ ಸಾರಿಗೆ ಒಕ್ಕೂಟ ತಟಸ್ಥ ನಿಲುವು ತೆಗೆದುಕೊಂಡಿದೆ.

ಏನಿರಲ್ಲ? ಮಾಲ್, ಓಲಾ, ಓಬರ್ ಆಟೋ ಕ್ಯಾಬ್ ಸೇವೆ ಇರಲ್ಲ. ಎಲ್ಲಾ ಚಿತ್ರಮಂದಿರಗಳು ಬಂದ್ ಆಗಲಿವೆ. ಸಿನಿಮಾ, ಧಾರಾವಾಹಿಗಳ ಚಿತ್ರೀಕರಣ ಸಹ ಸ್ತಬ್ಧವಾಗಲಿದೆ. ಪ್ರತಿಭಟನಾಕಾರರು ರಸ್ತೆಗಿಳಿದು ಪ್ರತಿಭಟನೆ ನಡೆಸೋ ಸಾಧ್ಯತೆ ಇರೋ ಕಾರಣ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಸಂಚಾರದಲ್ಲಿ ಏರುಪೇರು ಆಗಬಹುದು. ಇನ್ನು ಶಾಲಾ-ಕಾಲೇಜುಗಳು ತೆರೆಯೋದು ಅನುಮಾನ ಎಂದು ಅಂದಾಜಿಸಲಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

7 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago