ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವ ಸಂಭ್ರಮ

November 1, 2024
6:39 AM
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

ರಾಜ್ಯದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಸಂಭ್ರಮ. ನವೆಂಬರ್ 1, 1973 ರಲ್ಲಿ ಮೈಸೂರು ರಾಜ್ಯದ ಬದಲು ಕರ್ನಾಟಕ ಎಂದು ಹೆಸರಿಡಲಾಯಿತು. ಹೀಗೆ ಉದಯವಾದ ಕರುನಾಡಿನಲ್ಲಿ ಇಂದು  ಸ್ವಾಭಿಮಾನದ ಸಂಕೇತವಾಗಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ಸಂಭ್ರಮದ ದಿನವಾಗಿ ಆಚರಣೆ.

1956ರ ನವೆಂಬರ್ 1 ರಂದು ಮೈಸೂರು ರಾಜ್ಯವು ರಚನೆಯಾಯಿತು. ದಕ್ಷಿಣ ಭಾರತದಲ್ಲಿ ಹರಡಿದ್ದ ಕನ್ನಡ ಭಾಷೆ ಮಾತನಾಡುವ ಪ್ರದೇಶವನ್ನು ವಿಲೀನಗೊಳಿಸಿ ಮೈಸೂರು ರಾಜ್ಯವನ್ನು ಘೋಷಿಸಲಾಗಿತ್ತು. ನಂತರ ನವೆಂಬರ್ 1, 1973 ರಲ್ಲಿ ಮೈಸೂರು ರಾಜ್ಯದ ಬದಲು ಕರ್ನಾಟಕ ಎಂದು ಹೆಸರಿಡಲಾಯಿತು. ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಾಗ ದೇವರಾಜ್ ಅರಸು ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕದ ಏಕೀಕರಣಕ್ಕೆ ಮನ್ನಣೆ ನೀಡಿದ ಇತರ ವ್ಯಕ್ತಿಗಳಲ್ಲಿ ಸಾಹಿತಿಗಳಾದ ಕೆ. ಶಿವರಾಮ ಕಾರಂತ್, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಎನ್. ಕೃಷ್ಣರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ ಸೇರಿದ್ದಾರೆ.

ಕರ್ನಾಟಕವನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದೆ. ಮೈಸೂರು ರಾಜ್ಯ, ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ ಮತ್ತು ಮದ್ರಾಸ್ ಕರ್ನಾಟಕ. ಈ ಎಲ್ಲ ಭಾಗಗಳಲ್ಲಿ ಕನ್ನಡ ಮಾತನಾಡುವವರಿಗೆ ಮನ್ನಣೆ ಇದೆ.  ಇದೀಗ ಸಂಭ್ರಮದ ದಿನ.

ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ.  ಸಮಾರಂಭದಲ್ಲಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ನಿರ್ಮಾಲಾ ಸೀತಾರಾಮನ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಬೀದರ್ ಜಿಲ್ಲಾಡಳಿತ ವತಿಯಿಂದ ನಾಳೆ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ 11,000 ಕಿ.ಮೀ ಕರಾವಳಿ ಅಪಾಯದ ಅಂಚಿನಲ್ಲಿ – ಮುಂದಿನ 15 ವರ್ಷ ಕರಾವಳಿ ಕರ್ನಾಟಕಕ್ಕೆ ನಿರ್ಣಾಯಕ | ಹೊಸ ಹವಾಮಾನ ವರದಿ ಎಚ್ಚರಿಕೆ
May 31, 2026
7:16 AM
by: ದ ರೂರಲ್ ಮಿರರ್.ಕಾಂ
‘ಸೂಪರ್‌ ಎಲ್‌ ನಿನೊ’ ಆತಂಕ | ಭಾರತದಲ್ಲಿ ಮುಂಗಾರು ಸಂಕಷ್ಟ – ಕೃಷಿ ಮತ್ತು ವಿದ್ಯುತ್‌ ಬೇಡಿಕೆಗೆ ದೊಡ್ಡ ಸವಾಲು?
May 31, 2026
6:55 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ
May 31, 2026
6:46 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂ ಅಭಿವೃದ್ಧಿಗೆ ₹339 ಕೋಟಿ ಹೂಡಿಕೆ – ಕೃಷಿ, ಪ್ರವಾಸೋದ್ಯಮ, ರಸ್ತೆ ಸಂಪರ್ಕಕ್ಕೆ ಉತ್ತೇಜನ
May 31, 2026
6:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror