Advertisement

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವ ಸಂಭ್ರಮ

Share

ರಾಜ್ಯದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಸಂಭ್ರಮ. ನವೆಂಬರ್ 1, 1973 ರಲ್ಲಿ ಮೈಸೂರು ರಾಜ್ಯದ ಬದಲು ಕರ್ನಾಟಕ ಎಂದು ಹೆಸರಿಡಲಾಯಿತು. ಹೀಗೆ ಉದಯವಾದ ಕರುನಾಡಿನಲ್ಲಿ ಇಂದು  ಸ್ವಾಭಿಮಾನದ ಸಂಕೇತವಾಗಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ಸಂಭ್ರಮದ ದಿನವಾಗಿ ಆಚರಣೆ.

1956ರ ನವೆಂಬರ್ 1 ರಂದು ಮೈಸೂರು ರಾಜ್ಯವು ರಚನೆಯಾಯಿತು. ದಕ್ಷಿಣ ಭಾರತದಲ್ಲಿ ಹರಡಿದ್ದ ಕನ್ನಡ ಭಾಷೆ ಮಾತನಾಡುವ ಪ್ರದೇಶವನ್ನು ವಿಲೀನಗೊಳಿಸಿ ಮೈಸೂರು ರಾಜ್ಯವನ್ನು ಘೋಷಿಸಲಾಗಿತ್ತು. ನಂತರ ನವೆಂಬರ್ 1, 1973 ರಲ್ಲಿ ಮೈಸೂರು ರಾಜ್ಯದ ಬದಲು ಕರ್ನಾಟಕ ಎಂದು ಹೆಸರಿಡಲಾಯಿತು. ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಾಗ ದೇವರಾಜ್ ಅರಸು ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕದ ಏಕೀಕರಣಕ್ಕೆ ಮನ್ನಣೆ ನೀಡಿದ ಇತರ ವ್ಯಕ್ತಿಗಳಲ್ಲಿ ಸಾಹಿತಿಗಳಾದ ಕೆ. ಶಿವರಾಮ ಕಾರಂತ್, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಎನ್. ಕೃಷ್ಣರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ ಸೇರಿದ್ದಾರೆ.

ಕರ್ನಾಟಕವನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದೆ. ಮೈಸೂರು ರಾಜ್ಯ, ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ ಮತ್ತು ಮದ್ರಾಸ್ ಕರ್ನಾಟಕ. ಈ ಎಲ್ಲ ಭಾಗಗಳಲ್ಲಿ ಕನ್ನಡ ಮಾತನಾಡುವವರಿಗೆ ಮನ್ನಣೆ ಇದೆ.  ಇದೀಗ ಸಂಭ್ರಮದ ದಿನ.

ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ.  ಸಮಾರಂಭದಲ್ಲಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ನಿರ್ಮಾಲಾ ಸೀತಾರಾಮನ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಬೀದರ್ ಜಿಲ್ಲಾಡಳಿತ ವತಿಯಿಂದ ನಾಳೆ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago