Advertisement

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವ ಸಂಭ್ರಮ

Share

ರಾಜ್ಯದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಸಂಭ್ರಮ. ನವೆಂಬರ್ 1, 1973 ರಲ್ಲಿ ಮೈಸೂರು ರಾಜ್ಯದ ಬದಲು ಕರ್ನಾಟಕ ಎಂದು ಹೆಸರಿಡಲಾಯಿತು. ಹೀಗೆ ಉದಯವಾದ ಕರುನಾಡಿನಲ್ಲಿ ಇಂದು  ಸ್ವಾಭಿಮಾನದ ಸಂಕೇತವಾಗಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ಸಂಭ್ರಮದ ದಿನವಾಗಿ ಆಚರಣೆ.

1956ರ ನವೆಂಬರ್ 1 ರಂದು ಮೈಸೂರು ರಾಜ್ಯವು ರಚನೆಯಾಯಿತು. ದಕ್ಷಿಣ ಭಾರತದಲ್ಲಿ ಹರಡಿದ್ದ ಕನ್ನಡ ಭಾಷೆ ಮಾತನಾಡುವ ಪ್ರದೇಶವನ್ನು ವಿಲೀನಗೊಳಿಸಿ ಮೈಸೂರು ರಾಜ್ಯವನ್ನು ಘೋಷಿಸಲಾಗಿತ್ತು. ನಂತರ ನವೆಂಬರ್ 1, 1973 ರಲ್ಲಿ ಮೈಸೂರು ರಾಜ್ಯದ ಬದಲು ಕರ್ನಾಟಕ ಎಂದು ಹೆಸರಿಡಲಾಯಿತು. ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಾಗ ದೇವರಾಜ್ ಅರಸು ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕದ ಏಕೀಕರಣಕ್ಕೆ ಮನ್ನಣೆ ನೀಡಿದ ಇತರ ವ್ಯಕ್ತಿಗಳಲ್ಲಿ ಸಾಹಿತಿಗಳಾದ ಕೆ. ಶಿವರಾಮ ಕಾರಂತ್, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಎನ್. ಕೃಷ್ಣರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ ಸೇರಿದ್ದಾರೆ.

ಕರ್ನಾಟಕವನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದೆ. ಮೈಸೂರು ರಾಜ್ಯ, ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ ಮತ್ತು ಮದ್ರಾಸ್ ಕರ್ನಾಟಕ. ಈ ಎಲ್ಲ ಭಾಗಗಳಲ್ಲಿ ಕನ್ನಡ ಮಾತನಾಡುವವರಿಗೆ ಮನ್ನಣೆ ಇದೆ.  ಇದೀಗ ಸಂಭ್ರಮದ ದಿನ.

ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ.  ಸಮಾರಂಭದಲ್ಲಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ನಿರ್ಮಾಲಾ ಸೀತಾರಾಮನ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಬೀದರ್ ಜಿಲ್ಲಾಡಳಿತ ವತಿಯಿಂದ ನಾಳೆ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

3 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

4 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

10 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

16 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago