ಅನುಕ್ರಮ

ಕನ್ನಡ ರಾಜ್ಯೋತ್ಸವ | ಜನ ಮೆಚ್ಚಿದ ಜನಜನಿತ ನುಡಿ-ಕನ್ನಡ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕನ್ನಡ ಬರಿಯ ಭಾಷೆಯಲ್ಲ. ಅದು ಹೂವಿಂದ ಹೂವಿಗೆ ಹಾರುವ ಪಾತರಗಿತ್ತಿಯಂತೆ, ಮಕರಂದವ ಹೀರಿ ಇನ್ನೇನು ತೆರಳಲು ಸಿದ್ಧವಾದ ದುಂಬಿಯ ಬಾಯಿಯಲ್ಲಿನ ಸವಿ ಜೇನಿನಂತೆ, ತಾಯಿಯೊಬ್ಬಳು ತನ್ನ ಮಗುವಿಗೆ ಹಾಲುಣಿಸುವಂತೆ ಕಾಣುವ, ಕೇಳುವ, ಅನುಭವಿಸುವ ಭಾವ. ಭಾವನೆಗಳ ಮೂಲಕ ಬಂಧಗಳು ಬೆಸೆಯುತ್ತವೆ.

Advertisement

ಅಂತೆಯೇ ಭಾಷೆಯ ಮೂಲಕ ಸಾಹಿತ್ಯ ಕೃಷಿ ಉದಯಿಸಿ ಹೆಮ್ಮರವಾಗಿ ಬೆಳೆದು ನಿಲ್ಲುತ್ತದೆ. ಕನ್ನಡವೆಂಬುದು ನಿಂತ ನೀರಲ್ಲ.ಅದು ಹರಿವ ನಿಷ್ಕಲ್ಮಶ ಜಲ. ಎಲ್ಲಿಯವರೆಗೆ ಕನ್ನಡವನ್ನು ಅಪ್ಪಿಕೊಳ್ಳುವ,ಒಪ್ಪಿಕೊಳ್ಳುವವರಿರುತ್ತಾರೋ ಅಲ್ಲಿಯವರೆಗೂ ಕನ್ನಡ ಶಾಶ್ವತವಾಗಿರುತ್ತದೆ.

ಕನ್ನಡ ಭಾಷೆ ಕೇವಲ ಇಂತಿಷ್ಟೇ ಭೌಗೋಳಿಕ ಪ್ರದೇಶಕ್ಕೆ ಅಥವಾ ಇಂತಿಷ್ಟೇ ಜನ ಸಮುದಾಯಕ್ಕೆಂದು ಸೀಮಿತವಾಗಿಲ್ಲ.ಜನಮನಗಳಲ್ಲಿ ಅಚ್ಚಳಿಯದೆ ಉಳಿದ ಭಾಷೆಯಿದು.ಯಾವುದೇ ರಾಜ್ಯವಾಗಲೀ,ಯಾವುದೇ ದೇಶವಾಗಲೀ ಮುಗ್ಧ ಮನಸ್ಸಿನ ಕುಡಿ ಕಂದಮ್ಮಗಳಿಂದ ಹಿಡಿದು ಜ್ಞಾನ ವೃದ್ಧರೂ, ವಯೋವೃದ್ಧರಾದಿಯಾಗಿ ಕನ್ನಡ ನುಡಿಯುವ ಪ್ರತಿಯೋರ್ವರೂ ಕನ್ನಡಿಗರೇ. ಭಾಷೆ ಎಂದಿಗೂ ಯಾರ ಸ್ವತ್ತಲ್ಲ. ಭಾಷೆ ಇರುವುದು ಸಂವಹನಕ್ಕಾಗಿ. ಭಾವನೆಗಳನ್ನು ವ್ಯಕ್ತಪಡಿಸುವುದಕ್ಕಾಗಿ. ಹೀಗಾಗಿ ಕೇವಲ ಕನ್ನಡ ಮಾತನಾಡುವವರನ್ನಷ್ಟೇ ಅಲ್ಲ, ಕನ್ನಡವನ್ನು ಗೌರವಿಸುವ, ಕನ್ನಡವನ್ನು ಪೂಜಿಸುವ ಪ್ರತಿಯೊಬ್ಬನನ್ನೂ ಕನ್ನಡಾಂಬೆ ತನ್ನ ಮಗುವೆಂದೇ ಪರಿಗಣಿಸುತ್ತಾಳೆ. ಕನ್ನಡಮ್ಮನ ದೇಗುಲವಿರುವುದು ಪ್ರತಿ ಮನಗಳಲ್ಲಿ, ಸಾರಸ್ವತ ನುಡಿಗಳಲ್ಲಿ. ಕನ್ನಡಾಂಬೆ ಮಾತೃ ಸ್ವರೂಪಳು.ನಮ್ಮನ್ನುದ್ಧರಿಸುವವಳು ಆಕೆ.
ಕನ್ನಡ ಕಲಿಕೆ ಎಂದಿಗೂ ಯಾರಿಗೂ ಒತ್ತಾಯಪೂರ್ವಕವಾಗಿರಬಾರದು. ಐಚ್ಚಿಕವಾಗಿ ಅಥವಾ ಸ್ವ -ಭಾಷಾ ಪ್ರೇಮದಿಂದ ಅದನ್ನು ಕಲಿಯಬೇಕು ಹೊರತು ಹೇರಿಕೆಯಿಂದಲ್ಲ. ಯಾವುದೇ ವಸ್ತುವಾಗಲಿ ವಿಚಾರವಾಗಲಿ ಪೂರ್ಣ ಪ್ರಮಾಣದಲ್ಲಿ ಅದನ್ನು ಗೌರವಿಸಿ ಅದರಲ್ಲಿ ಒಂದಾಗಿ ಕಲಿತರೆ ಅದು ಪರಿಪೂರ್ಣತೆಯನ್ನು ಪಡೆದುಕೊಳ್ಳುತ್ತದೆ .ಕನ್ನಡ ಕಲಿಕೆಯೂ ಹಾಗೆಯೇ .ಸ್ವ- ಅಭಿರುಚಿಯಿಂದ ಕಲಿತರೆ ಮಾತ್ರವೇ ಅದರ ಆಳವು ತಿಳಿಯುವುದು .ಕನ್ನಡವೆಂಬುದು ಸಾಗರವಿದ್ದಂತೆ. ಆಳವಾಗಿಯೂ ವಿಶಾಲವಾಗಿಯೂ ತನ್ನ ರೆಂಬೆ ಕೊಂಬೆಗಳನ್ನ ಹರಡಿಕೊಂಡಿರುವ ಅಪಾರವಾದ ಜ್ಞಾನದ ನಿಧಿಯದು.

ಬಗೆದಷ್ಟು ಮೊಗೆಯದ ಕಲಿತಷ್ಟು ಮುಗಿಯದ ಸಿರಿಸಂಪತ್ತನ್ನು ಕಾಪಿಟ್ಟುಕೊಳ್ಳಬೇಕಾದ ಅನಿವಾರ್ಯತೆ ಪ್ರತಿಯೊಬ್ಬ ಕನ್ನಡಿಗನಿಗಿದೆ.ಭಾಷಾ ಪ್ರೇಮ ಕೇವಲ ಒಂದು ದಿನಕ್ಕೆ ಸೀಮಿತವಾಗದಿರಲಿ. ಕನ್ನಡದ ಜಯಭೇರಿಯು ಪ್ರಚಂಡವಾಗಿ ಮೊಳಗಲಿ.ಕಸ್ತೂರಿ ಕನ್ನಡವು ಜನಮಾನಸದಲ್ಲಿ ರಾರಾಜಿಸಲಿ. ಕನ್ನಡಾಂಬೆಯ ಕೀರ್ತಿ ಉತ್ತುಂಗಕ್ಕೇರಲಿ.

ಬರಹ:
ಅನ್ನಪೂರ್ಣ ಎನ್ ಕುತ್ತಾಜೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

13 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

13 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

14 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

22 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

1 day ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

1 day ago