ಅನುಕ್ರಮ

ಕನ್ನಡ ರಾಜ್ಯೋತ್ಸವ | ಜನ ಮೆಚ್ಚಿದ ಜನಜನಿತ ನುಡಿ-ಕನ್ನಡ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕನ್ನಡ ಬರಿಯ ಭಾಷೆಯಲ್ಲ. ಅದು ಹೂವಿಂದ ಹೂವಿಗೆ ಹಾರುವ ಪಾತರಗಿತ್ತಿಯಂತೆ, ಮಕರಂದವ ಹೀರಿ ಇನ್ನೇನು ತೆರಳಲು ಸಿದ್ಧವಾದ ದುಂಬಿಯ ಬಾಯಿಯಲ್ಲಿನ ಸವಿ ಜೇನಿನಂತೆ, ತಾಯಿಯೊಬ್ಬಳು ತನ್ನ ಮಗುವಿಗೆ ಹಾಲುಣಿಸುವಂತೆ ಕಾಣುವ, ಕೇಳುವ, ಅನುಭವಿಸುವ ಭಾವ. ಭಾವನೆಗಳ ಮೂಲಕ ಬಂಧಗಳು ಬೆಸೆಯುತ್ತವೆ.

Advertisement

ಅಂತೆಯೇ ಭಾಷೆಯ ಮೂಲಕ ಸಾಹಿತ್ಯ ಕೃಷಿ ಉದಯಿಸಿ ಹೆಮ್ಮರವಾಗಿ ಬೆಳೆದು ನಿಲ್ಲುತ್ತದೆ. ಕನ್ನಡವೆಂಬುದು ನಿಂತ ನೀರಲ್ಲ.ಅದು ಹರಿವ ನಿಷ್ಕಲ್ಮಶ ಜಲ. ಎಲ್ಲಿಯವರೆಗೆ ಕನ್ನಡವನ್ನು ಅಪ್ಪಿಕೊಳ್ಳುವ,ಒಪ್ಪಿಕೊಳ್ಳುವವರಿರುತ್ತಾರೋ ಅಲ್ಲಿಯವರೆಗೂ ಕನ್ನಡ ಶಾಶ್ವತವಾಗಿರುತ್ತದೆ.

ಕನ್ನಡ ಭಾಷೆ ಕೇವಲ ಇಂತಿಷ್ಟೇ ಭೌಗೋಳಿಕ ಪ್ರದೇಶಕ್ಕೆ ಅಥವಾ ಇಂತಿಷ್ಟೇ ಜನ ಸಮುದಾಯಕ್ಕೆಂದು ಸೀಮಿತವಾಗಿಲ್ಲ.ಜನಮನಗಳಲ್ಲಿ ಅಚ್ಚಳಿಯದೆ ಉಳಿದ ಭಾಷೆಯಿದು.ಯಾವುದೇ ರಾಜ್ಯವಾಗಲೀ,ಯಾವುದೇ ದೇಶವಾಗಲೀ ಮುಗ್ಧ ಮನಸ್ಸಿನ ಕುಡಿ ಕಂದಮ್ಮಗಳಿಂದ ಹಿಡಿದು ಜ್ಞಾನ ವೃದ್ಧರೂ, ವಯೋವೃದ್ಧರಾದಿಯಾಗಿ ಕನ್ನಡ ನುಡಿಯುವ ಪ್ರತಿಯೋರ್ವರೂ ಕನ್ನಡಿಗರೇ. ಭಾಷೆ ಎಂದಿಗೂ ಯಾರ ಸ್ವತ್ತಲ್ಲ. ಭಾಷೆ ಇರುವುದು ಸಂವಹನಕ್ಕಾಗಿ. ಭಾವನೆಗಳನ್ನು ವ್ಯಕ್ತಪಡಿಸುವುದಕ್ಕಾಗಿ. ಹೀಗಾಗಿ ಕೇವಲ ಕನ್ನಡ ಮಾತನಾಡುವವರನ್ನಷ್ಟೇ ಅಲ್ಲ, ಕನ್ನಡವನ್ನು ಗೌರವಿಸುವ, ಕನ್ನಡವನ್ನು ಪೂಜಿಸುವ ಪ್ರತಿಯೊಬ್ಬನನ್ನೂ ಕನ್ನಡಾಂಬೆ ತನ್ನ ಮಗುವೆಂದೇ ಪರಿಗಣಿಸುತ್ತಾಳೆ. ಕನ್ನಡಮ್ಮನ ದೇಗುಲವಿರುವುದು ಪ್ರತಿ ಮನಗಳಲ್ಲಿ, ಸಾರಸ್ವತ ನುಡಿಗಳಲ್ಲಿ. ಕನ್ನಡಾಂಬೆ ಮಾತೃ ಸ್ವರೂಪಳು.ನಮ್ಮನ್ನುದ್ಧರಿಸುವವಳು ಆಕೆ.
ಕನ್ನಡ ಕಲಿಕೆ ಎಂದಿಗೂ ಯಾರಿಗೂ ಒತ್ತಾಯಪೂರ್ವಕವಾಗಿರಬಾರದು. ಐಚ್ಚಿಕವಾಗಿ ಅಥವಾ ಸ್ವ -ಭಾಷಾ ಪ್ರೇಮದಿಂದ ಅದನ್ನು ಕಲಿಯಬೇಕು ಹೊರತು ಹೇರಿಕೆಯಿಂದಲ್ಲ. ಯಾವುದೇ ವಸ್ತುವಾಗಲಿ ವಿಚಾರವಾಗಲಿ ಪೂರ್ಣ ಪ್ರಮಾಣದಲ್ಲಿ ಅದನ್ನು ಗೌರವಿಸಿ ಅದರಲ್ಲಿ ಒಂದಾಗಿ ಕಲಿತರೆ ಅದು ಪರಿಪೂರ್ಣತೆಯನ್ನು ಪಡೆದುಕೊಳ್ಳುತ್ತದೆ .ಕನ್ನಡ ಕಲಿಕೆಯೂ ಹಾಗೆಯೇ .ಸ್ವ- ಅಭಿರುಚಿಯಿಂದ ಕಲಿತರೆ ಮಾತ್ರವೇ ಅದರ ಆಳವು ತಿಳಿಯುವುದು .ಕನ್ನಡವೆಂಬುದು ಸಾಗರವಿದ್ದಂತೆ. ಆಳವಾಗಿಯೂ ವಿಶಾಲವಾಗಿಯೂ ತನ್ನ ರೆಂಬೆ ಕೊಂಬೆಗಳನ್ನ ಹರಡಿಕೊಂಡಿರುವ ಅಪಾರವಾದ ಜ್ಞಾನದ ನಿಧಿಯದು.

ಬಗೆದಷ್ಟು ಮೊಗೆಯದ ಕಲಿತಷ್ಟು ಮುಗಿಯದ ಸಿರಿಸಂಪತ್ತನ್ನು ಕಾಪಿಟ್ಟುಕೊಳ್ಳಬೇಕಾದ ಅನಿವಾರ್ಯತೆ ಪ್ರತಿಯೊಬ್ಬ ಕನ್ನಡಿಗನಿಗಿದೆ.ಭಾಷಾ ಪ್ರೇಮ ಕೇವಲ ಒಂದು ದಿನಕ್ಕೆ ಸೀಮಿತವಾಗದಿರಲಿ. ಕನ್ನಡದ ಜಯಭೇರಿಯು ಪ್ರಚಂಡವಾಗಿ ಮೊಳಗಲಿ.ಕಸ್ತೂರಿ ಕನ್ನಡವು ಜನಮಾನಸದಲ್ಲಿ ರಾರಾಜಿಸಲಿ. ಕನ್ನಡಾಂಬೆಯ ಕೀರ್ತಿ ಉತ್ತುಂಗಕ್ಕೇರಲಿ.

Advertisement
ಬರಹ:
ಅನ್ನಪೂರ್ಣ ಎನ್ ಕುತ್ತಾಜೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

1 hour ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

2 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

2 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

2 hours ago

ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

2 hours ago

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…

2 hours ago