ಕನ್ನಡ ಬರಿಯ ಭಾಷೆಯಲ್ಲ. ಅದು ಹೂವಿಂದ ಹೂವಿಗೆ ಹಾರುವ ಪಾತರಗಿತ್ತಿಯಂತೆ, ಮಕರಂದವ ಹೀರಿ ಇನ್ನೇನು ತೆರಳಲು ಸಿದ್ಧವಾದ ದುಂಬಿಯ ಬಾಯಿಯಲ್ಲಿನ ಸವಿ ಜೇನಿನಂತೆ, ತಾಯಿಯೊಬ್ಬಳು ತನ್ನ ಮಗುವಿಗೆ ಹಾಲುಣಿಸುವಂತೆ ಕಾಣುವ, ಕೇಳುವ, ಅನುಭವಿಸುವ ಭಾವ. ಭಾವನೆಗಳ ಮೂಲಕ ಬಂಧಗಳು ಬೆಸೆಯುತ್ತವೆ.
ಅಂತೆಯೇ ಭಾಷೆಯ ಮೂಲಕ ಸಾಹಿತ್ಯ ಕೃಷಿ ಉದಯಿಸಿ ಹೆಮ್ಮರವಾಗಿ ಬೆಳೆದು ನಿಲ್ಲುತ್ತದೆ. ಕನ್ನಡವೆಂಬುದು ನಿಂತ ನೀರಲ್ಲ.ಅದು ಹರಿವ ನಿಷ್ಕಲ್ಮಶ ಜಲ. ಎಲ್ಲಿಯವರೆಗೆ ಕನ್ನಡವನ್ನು ಅಪ್ಪಿಕೊಳ್ಳುವ,ಒಪ್ಪಿಕೊಳ್ಳುವವರಿರುತ್ತಾರೋ ಅಲ್ಲಿಯವರೆಗೂ ಕನ್ನಡ ಶಾಶ್ವತವಾಗಿರುತ್ತದೆ.
ಬಗೆದಷ್ಟು ಮೊಗೆಯದ ಕಲಿತಷ್ಟು ಮುಗಿಯದ ಸಿರಿಸಂಪತ್ತನ್ನು ಕಾಪಿಟ್ಟುಕೊಳ್ಳಬೇಕಾದ ಅನಿವಾರ್ಯತೆ ಪ್ರತಿಯೊಬ್ಬ ಕನ್ನಡಿಗನಿಗಿದೆ.ಭಾಷಾ ಪ್ರೇಮ ಕೇವಲ ಒಂದು ದಿನಕ್ಕೆ ಸೀಮಿತವಾಗದಿರಲಿ. ಕನ್ನಡದ ಜಯಭೇರಿಯು ಪ್ರಚಂಡವಾಗಿ ಮೊಳಗಲಿ.ಕಸ್ತೂರಿ ಕನ್ನಡವು ಜನಮಾನಸದಲ್ಲಿ ರಾರಾಜಿಸಲಿ. ಕನ್ನಡಾಂಬೆಯ ಕೀರ್ತಿ ಉತ್ತುಂಗಕ್ಕೇರಲಿ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…