ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

October 17, 2020
11:55 AM

ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ದ.ಕ ಅಪರ ಜಿಲ್ಲಾಧಿಕಾರಿ ದಿನೇಶ್ ಕುಮಾರ್ ತಿಳಿಸಿದರು.

ಅವರು ಅ.16ರಂದು ಜಿಲ್ಲಾಧಿಕಾರಿ ಕಚೇರಿ ಸಂಭಾಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ್ದರು. ನವೆಂಬರ್ 1 ರಂದು ನಗರದ ನೆಹರು ಮೈದಾನದಲ್ಲಿ ಬೆಳಿಗ್ಗೆ 8.45 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ ಹಾಗೂ ಕಾರ್ಯಕ್ರಮವನ್ನು ಈ ಬಾರಿ ಕೋವಿಡ್ ಮಾರ್ಗಸೂಚಿ ಅನ್ವಯ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಸಚಿವರು ಪಥ ಸಂಚಲನ ವೀಕ್ಷಣೆ ಮಾಡುವರು. ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದರು. ಕಾರ್ಯಕ್ರಮವನ್ನು ಸುವ್ಯವಸ್ಥೆಯಾಗಿ ನಡೆಸಲು ಉಪಸಮಿತಿಗಳನ್ನು ರಚಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಜವಾಬ್ದಾರಿಯನ್ನು ನೀಡಲಾಯಿತು.

ಸಭೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ವೆಂಕಟೇಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪದ್ರೀಪ್ ಕುಮಾರ್ ಕಲ್ಕೂರ್ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಮತ್ತಿತರು ಉಪಸ್ಥಿತರಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror