ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ದ.ಕ ಅಪರ ಜಿಲ್ಲಾಧಿಕಾರಿ ದಿನೇಶ್ ಕುಮಾರ್ ತಿಳಿಸಿದರು.
ಅವರು ಅ.16ರಂದು ಜಿಲ್ಲಾಧಿಕಾರಿ ಕಚೇರಿ ಸಂಭಾಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ್ದರು. ನವೆಂಬರ್ 1 ರಂದು ನಗರದ ನೆಹರು ಮೈದಾನದಲ್ಲಿ ಬೆಳಿಗ್ಗೆ 8.45 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ ಹಾಗೂ ಕಾರ್ಯಕ್ರಮವನ್ನು ಈ ಬಾರಿ ಕೋವಿಡ್ ಮಾರ್ಗಸೂಚಿ ಅನ್ವಯ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸಚಿವರು ಪಥ ಸಂಚಲನ ವೀಕ್ಷಣೆ ಮಾಡುವರು. ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದರು. ಕಾರ್ಯಕ್ರಮವನ್ನು ಸುವ್ಯವಸ್ಥೆಯಾಗಿ ನಡೆಸಲು ಉಪಸಮಿತಿಗಳನ್ನು ರಚಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಜವಾಬ್ದಾರಿಯನ್ನು ನೀಡಲಾಯಿತು.
ಸಭೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ವೆಂಕಟೇಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪದ್ರೀಪ್ ಕುಮಾರ್ ಕಲ್ಕೂರ್ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಮತ್ತಿತರು ಉಪಸ್ಥಿತರಿದರು.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…