Advertisement
MIRROR FOCUS

ಕನ್ನಡ ರಾಜ್ಯೋತ್ಸವದ ಶುಭಾಶಯಗಳು

Share

ಭಾಷೆ ಇರುವುದು ವಿಷಯವನ್ನು ಹಂಚಿಕೊಳ್ಳಲು. ಭಾವನೆಗಳನ್ನು ಅಭಿವ್ಯಕ್ತಿಸುವ ಸಲುವಾಗಿ. ಕನಸುಗಳನ್ನು ಕಟ್ಟಲು, ಕಂಡ ಕನಸನ್ನು ಈಡೇರಿಸಿಕೊಳ್ಳಲು.

ಎಲ್ಲರಿಗೂ ಅವರವರ ಭಾಷೆಯ ಬಗ್ಗೆ ವಿಶೇಷ ಮಮತೆ ಇರುವುದು ಸಹಜವೇ. ಮಾತೃಭಾಷೆಯ ಬಗ್ಗೆ ಸ್ವಲ್ಪ ಜಾಸ್ತಿಯೇ ವ್ಯಾಮೋಹ. ಅವರವರ ಭಾಷೆ ಮಾತನಾಡುವುದು ಇಷ್ಟದ ವಿಷಯವೇ. ನಮ್ಮ ಕರ್ನಾಟಕದಲ್ಲಂತೂ ನವೆಂಬರ್ ಬಂದರೆ ಒಮ್ಮೆ ಮೈಕೊಡವಿ ನಿಂತಂತಾಗುತ್ತದೆ. ಪೇಪರ್ ನಲ್ಲೂ, ದೂರದರ್ಶನದಲ್ಲೂ, ಆಕಾಶವಾಣಿಯಲ್ಲೂ, ಕನ್ನಡವೇ ರಿಂಗಿಣಿಸುತ್ತದೆ. ನಮ್ಮ ಈ ನಡೆ ಮನಸಿಗೆ ಕಸಿವಿಸಿ ಉಂಟು ಮಾಡುತ್ತದೆ.

ಭಾಷೆಯಾಗಿ ಕನ್ನಡ ಶ್ರೀಮಂತವಾಗಿದೆ. ಅಭಿವ್ಯಕ್ತಿಸಲು ಪ್ರತಿಯೊಂದು ಭಾವನೆಗಳಿಗೂ, ಸಂಬಂದಗಳಿಗೂ ಅದರದ್ದೇ ಆದ ಶಬ್ಧಗಳಿವೆ. ಸಮೃದ್ಧವಾಗಿರುವ ಕನ್ನಡವನ್ನು ಉಳಿಸಿಕೊಳ್ಳುವುದು ಇಂದಿನ ಅನಿವಾರ್ಯತೆ. ಕನ್ನಡವನ್ನು ಶುದ್ಧವಾಗಿ ಮಾತನಾಡುವವರು ಸಿಕ್ಕಿದಾಗ ಮಾತುಗಳನ್ನು ಕೇಳಲು ಖುಷಿಯಾಗುತ್ತದೆ. ಇಂದು ನಮ್ಮ ಕನ್ನಡವೂ ಇತರ ಭಾಷೆಗಳ ಮಿಶ್ರಣದ ಕಿಚಡಿಯಾಗಿ ಬಿಟ್ಟಿದೆ. ನಾವು ಎಷ್ಟು ಅದಕ್ಕೆ ಹೊಂದಿಕೊಂಡಿದ್ದೇವೆಂದರೆ ಅದು ಕನ್ನಡವಲ್ಲವೆಂದು ಒಪ್ಪಿಕೊಳ್ಳಲೂ ಅಸಾಧ್ಯವೆಂಬಷ್ಟು. ಒಂದು ಹತ್ತು ವಾಕ್ಯ ಆಂಗ್ಲ ಶಬ್ದವನ್ನು ಬಳಸದೆ ಮಾತನಾಡುವುದು ಎಷ್ಟು ಕಷ್ಟವೆಂದು ಒಮ್ಮೆ ಪ್ರಯತ್ನಿಸಿದರೆ ಗೊತ್ತಾಗುತ್ತದೆ. ಸೋತು ಬಿಡುತ್ತೀರಿ! ಅಷ್ಟು ನಾವು ಹೊಂದಿಕೊಂಡಿದ್ದೇವೆ. ಬೇರೆ ಭಾಷೆಗಳನ್ನೂ ನಾವು ಕಲಿಯುವುದು ಒಳ್ಳೆಯದೇ. ಆದರೆ ಬಳಸುವಾಗ , ಮಾತನಾಡುವಾಗ ಆಯಾ ಭಾಷೆಯನ್ನೇ ಸರಿಯಾಗಿ, ಸ್ಷಷ್ಟವಾಗಿ ನುಡಿಯುವುದು ಚಂದವಲ್ಲವೇ.? ನುಡಿ ಕನ್ನಡ ನಡೆ ಕನ್ನಡ, ಬದುಕು ಕನ್ನಡ. ಜೈ ಕನ್ನಡಮ್ಮ, ಜೈ ಕರ್ನಾಟಕ.

 

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

23 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago