Advertisement
MIRROR FOCUS

ಕನ್ನಡ ರಾಜ್ಯೋತ್ಸವದ ಶುಭಾಶಯಗಳು

Share

ಭಾಷೆ ಇರುವುದು ವಿಷಯವನ್ನು ಹಂಚಿಕೊಳ್ಳಲು. ಭಾವನೆಗಳನ್ನು ಅಭಿವ್ಯಕ್ತಿಸುವ ಸಲುವಾಗಿ. ಕನಸುಗಳನ್ನು ಕಟ್ಟಲು, ಕಂಡ ಕನಸನ್ನು ಈಡೇರಿಸಿಕೊಳ್ಳಲು.

ಎಲ್ಲರಿಗೂ ಅವರವರ ಭಾಷೆಯ ಬಗ್ಗೆ ವಿಶೇಷ ಮಮತೆ ಇರುವುದು ಸಹಜವೇ. ಮಾತೃಭಾಷೆಯ ಬಗ್ಗೆ ಸ್ವಲ್ಪ ಜಾಸ್ತಿಯೇ ವ್ಯಾಮೋಹ. ಅವರವರ ಭಾಷೆ ಮಾತನಾಡುವುದು ಇಷ್ಟದ ವಿಷಯವೇ. ನಮ್ಮ ಕರ್ನಾಟಕದಲ್ಲಂತೂ ನವೆಂಬರ್ ಬಂದರೆ ಒಮ್ಮೆ ಮೈಕೊಡವಿ ನಿಂತಂತಾಗುತ್ತದೆ. ಪೇಪರ್ ನಲ್ಲೂ, ದೂರದರ್ಶನದಲ್ಲೂ, ಆಕಾಶವಾಣಿಯಲ್ಲೂ, ಕನ್ನಡವೇ ರಿಂಗಿಣಿಸುತ್ತದೆ. ನಮ್ಮ ಈ ನಡೆ ಮನಸಿಗೆ ಕಸಿವಿಸಿ ಉಂಟು ಮಾಡುತ್ತದೆ.

ಭಾಷೆಯಾಗಿ ಕನ್ನಡ ಶ್ರೀಮಂತವಾಗಿದೆ. ಅಭಿವ್ಯಕ್ತಿಸಲು ಪ್ರತಿಯೊಂದು ಭಾವನೆಗಳಿಗೂ, ಸಂಬಂದಗಳಿಗೂ ಅದರದ್ದೇ ಆದ ಶಬ್ಧಗಳಿವೆ. ಸಮೃದ್ಧವಾಗಿರುವ ಕನ್ನಡವನ್ನು ಉಳಿಸಿಕೊಳ್ಳುವುದು ಇಂದಿನ ಅನಿವಾರ್ಯತೆ. ಕನ್ನಡವನ್ನು ಶುದ್ಧವಾಗಿ ಮಾತನಾಡುವವರು ಸಿಕ್ಕಿದಾಗ ಮಾತುಗಳನ್ನು ಕೇಳಲು ಖುಷಿಯಾಗುತ್ತದೆ. ಇಂದು ನಮ್ಮ ಕನ್ನಡವೂ ಇತರ ಭಾಷೆಗಳ ಮಿಶ್ರಣದ ಕಿಚಡಿಯಾಗಿ ಬಿಟ್ಟಿದೆ. ನಾವು ಎಷ್ಟು ಅದಕ್ಕೆ ಹೊಂದಿಕೊಂಡಿದ್ದೇವೆಂದರೆ ಅದು ಕನ್ನಡವಲ್ಲವೆಂದು ಒಪ್ಪಿಕೊಳ್ಳಲೂ ಅಸಾಧ್ಯವೆಂಬಷ್ಟು. ಒಂದು ಹತ್ತು ವಾಕ್ಯ ಆಂಗ್ಲ ಶಬ್ದವನ್ನು ಬಳಸದೆ ಮಾತನಾಡುವುದು ಎಷ್ಟು ಕಷ್ಟವೆಂದು ಒಮ್ಮೆ ಪ್ರಯತ್ನಿಸಿದರೆ ಗೊತ್ತಾಗುತ್ತದೆ. ಸೋತು ಬಿಡುತ್ತೀರಿ! ಅಷ್ಟು ನಾವು ಹೊಂದಿಕೊಂಡಿದ್ದೇವೆ. ಬೇರೆ ಭಾಷೆಗಳನ್ನೂ ನಾವು ಕಲಿಯುವುದು ಒಳ್ಳೆಯದೇ. ಆದರೆ ಬಳಸುವಾಗ , ಮಾತನಾಡುವಾಗ ಆಯಾ ಭಾಷೆಯನ್ನೇ ಸರಿಯಾಗಿ, ಸ್ಷಷ್ಟವಾಗಿ ನುಡಿಯುವುದು ಚಂದವಲ್ಲವೇ.? ನುಡಿ ಕನ್ನಡ ನಡೆ ಕನ್ನಡ, ಬದುಕು ಕನ್ನಡ. ಜೈ ಕನ್ನಡಮ್ಮ, ಜೈ ಕರ್ನಾಟಕ.

 

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ

ಕೇರಳ ಸರ್ಕಾರ ರಬ್ಬರ್‌ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…

1 hour ago

ಮೂರು ವರ್ಷಗಳಲ್ಲಿ 28 ಲಕ್ಷಕ್ಕೂ ಅಧಿಕ ಮರ ಕಡಿಯಲು ಅನುಮತಿ…! ಪರಿಸರದ ಮೇಲೆ ಹೆಚ್ಚುತ್ತಿರುವ ಒತ್ತಡ

ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…

10 hours ago

ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ

ಜೂನ್ 30ರೊಳಗೆ LPG e-KYC ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. e-KYC ಬಾಕಿ…

10 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಸಂಕಷ್ಟ..? ಇದು ಅಡಿಕೆ ಉದ್ಯಮಕ್ಕೆ ಹೊಸ ಸಂಕಷ್ಟವೇ?

ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟದ ವಿರುದ್ಧ ಕಠಿಣ ಕ್ರಮಗಳ ಆತಂಕದ ಹಿನ್ನೆಲೆಯಲ್ಲಿ ಕರ್ನಾಟಕ ಅಡಿಕೆ…

12 hours ago

ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!

ಮಾತು ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದರೆ, ಮೌನ ಅದರ ಪರಿಪಕ್ವತೆಯ ಸಂಕೇತವಾಗಿದೆ. ಕೃತಜ್ಞತೆ, ಸಂಯಮ ಮತ್ತು…

17 hours ago

ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ

ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ…

17 hours ago