ಪುತ್ತೂರು ತಾಲೂಕಿನ 21 ನೇ ತಾಲೂಕು ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷ ಡಾ.ಶ್ರೀಧರ ಎಚ್.ಜಿ ಅವರಿಗೆ ಅಭಿನಂದನೆ |

September 27, 2022
2:34 PM

ಸಾಹಿತ್ಯ ಎನ್ನುವುದು ಒಂದು ಸಂಶೋಧನೆ ಇದ್ದಂತೆ. ಸಾಹಿತಿಯಾಗಬೇಕಾದರೆ ಆತ ನಿರಂತರವಾಗಿ ಸಂಶೋಧನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕಾಗುತ್ತದೆ. ಸಾಹಿತಿಗೆ ಇರುವಷ್ಟು ಜ್ಞಾನ ಬೇರೆ ಯಾರಿಗೂ ಇರಲು ಸಾಧ್ಯವಿಲ್ಲ. ಅಲ್ಲದೇ ಸಮಾಜದಲ್ಲಿ ಇರುವ ತೊಡಕುಗಳನ್ನು ಎತ್ತಿ ತೋರಿಸಬಹುದಾದ ಒಂದು ಗಟ್ಟಿತನ ಇರುವುದೂ ಕೂಡಾ ಸಾಹಿತಿಗಳಿಗೆ ಎಂದು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಹೇಳಿದರು.

ಪುತ್ತೂರಿನಲ್ಲಿ ಸೆ.29 ಹಾಗೂ 30 ರಂದು ನಡೆಯಲಿರುವ 21 ನೇಯ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ಎಚ್.ಜಿ ಅವರಿಗೆ ಕಾಲೇಜಿನಲ್ಲಿ ಏರ್ಪಡಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡಿದರು.  ಸಾಹಿತ್ಯ ಸಮ್ಮೇಳನಗಳಲ್ಲಿ ಸರ್ವಾಧ್ಯಕ್ಷತೆಯ ಜವಾಬ್ದಾರಿ ದೊರಕುವುದು ಅತ್ಯಂತ ಗೌರವದ ಸಂಗತಿ.ಇಂದು ಆ ಗೌರವ ನಮ್ಮ ಸಂಸ್ಥೆಯ ಪ್ರಾಧ್ಯಾಪಕರಾದ ಡಾ.ಶ್ರೀಧರ ಎಚ್.ಜಿ ಅವರಿಗೆ ಸಲ್ಲಿರುವುದು ಬಹಳ ಹೆಮೆಯ ವಿಚಾರ. ಅವರ ಪ್ರತಿಯೊಂದು ಬರವಣಿಗೆಯಲ್ಲೂ ಹೊಸತನವಿದೆ. ಸಮಾಜಕ್ಕೆ ಇವರ ಸಾಹಿತ್ಯದ ಕೊಡುಗೆ ಅಪಾರವಾದುದು. ಇವರ ಕೈಯಿಂದ ಸಾಹಿತ್ಯಗಳು ಇನ್ನಷ್ಟು ಮೂಡಿಬರಲಿ ರಾಷ್ಟ್ರ ಮಟ್ಟದಲ್ಲಿ ಮನ್ನಣೆ ಸಿಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಎಚ್.ಜಿ ಶ್ರೀಧರ, ನಮ್ಮಲ್ಲಿ ಮುಖ್ಯವಾಗಿ ಸಂಶೋಧನ ಮನೋಭಾವವಿರಬೇಕು. ಈ ಹುಡುಕಾಟದ ಮನೋಭಾವವಿರುವುದರಿಂದ ನಾವು ಹೊಸ ವಿಷಯಗಳನ್ನು ಕಲಿಯಲು ಸಾಧ್ಯವಾಗುತ್ತದೆ. ಹೊಸದುದನ್ನು ಹುಡುಕುತ್ತಾ ಹೋದಂತೆ ಅನೇಕ ಸೂಕ್ಷ್ಮವಾದ ವಿಚಾರಗಳು ನಮ್ಮ ಗಮನಕ್ಕೆ ಬರುತ್ತದೆ. ಈ ಎಲ್ಲಾ ವಿಚಾರಗಳು ಸಾಹಿತ್ಯದಲ್ಲಿ ನಮ್ಮನ್ನು ಆಳವಾಗಿ ತೊಡಗಿಸಿಕೊಳ್ಳಲು ಸಹಾಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೋ.ವಿಷ್ಣು ಗಣಪತಿ ಭಟ್  ಶುಭ ಹಾರೈಸಿದರು. ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ ಎಂ ಅಭಿನಂದನಾ ನುಡಿಗಳನ್ನಾಡಿದರು.ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ್ ನಾಯಕ್ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕೇತರ ವೃಂದ ಹಾಗೂ ಪತ್ರಿಕೋದ್ಯಮ ವಿಭಾಗದಿಂದ ಸಮ್ಮೇಳನಾಧ್ಯಕ್ಷ ಡಾ.ಶ್ರೀಧರ ಎಚ್.ಜಿ ಅವರನ್ನು ಸನ್ಮಾನಿಸಲಾಯಿತು.

ಐಕ್ಯೂಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ.ಎಸ್ ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಗೀತಾ ಕುಮಾರಿ ಟಿ ವಂದಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror