ಸಾಹಿತ್ಯ ಎನ್ನುವುದು ಒಂದು ಸಂಶೋಧನೆ ಇದ್ದಂತೆ. ಸಾಹಿತಿಯಾಗಬೇಕಾದರೆ ಆತ ನಿರಂತರವಾಗಿ ಸಂಶೋಧನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕಾಗುತ್ತದೆ. ಸಾಹಿತಿಗೆ ಇರುವಷ್ಟು ಜ್ಞಾನ ಬೇರೆ ಯಾರಿಗೂ ಇರಲು ಸಾಧ್ಯವಿಲ್ಲ. ಅಲ್ಲದೇ ಸಮಾಜದಲ್ಲಿ ಇರುವ ತೊಡಕುಗಳನ್ನು ಎತ್ತಿ ತೋರಿಸಬಹುದಾದ ಒಂದು ಗಟ್ಟಿತನ ಇರುವುದೂ ಕೂಡಾ ಸಾಹಿತಿಗಳಿಗೆ ಎಂದು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಹೇಳಿದರು.
ಪುತ್ತೂರಿನಲ್ಲಿ ಸೆ.29 ಹಾಗೂ 30 ರಂದು ನಡೆಯಲಿರುವ 21 ನೇಯ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ಎಚ್.ಜಿ ಅವರಿಗೆ ಕಾಲೇಜಿನಲ್ಲಿ ಏರ್ಪಡಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡಿದರು. ಸಾಹಿತ್ಯ ಸಮ್ಮೇಳನಗಳಲ್ಲಿ ಸರ್ವಾಧ್ಯಕ್ಷತೆಯ ಜವಾಬ್ದಾರಿ ದೊರಕುವುದು ಅತ್ಯಂತ ಗೌರವದ ಸಂಗತಿ.ಇಂದು ಆ ಗೌರವ ನಮ್ಮ ಸಂಸ್ಥೆಯ ಪ್ರಾಧ್ಯಾಪಕರಾದ ಡಾ.ಶ್ರೀಧರ ಎಚ್.ಜಿ ಅವರಿಗೆ ಸಲ್ಲಿರುವುದು ಬಹಳ ಹೆಮೆಯ ವಿಚಾರ. ಅವರ ಪ್ರತಿಯೊಂದು ಬರವಣಿಗೆಯಲ್ಲೂ ಹೊಸತನವಿದೆ. ಸಮಾಜಕ್ಕೆ ಇವರ ಸಾಹಿತ್ಯದ ಕೊಡುಗೆ ಅಪಾರವಾದುದು. ಇವರ ಕೈಯಿಂದ ಸಾಹಿತ್ಯಗಳು ಇನ್ನಷ್ಟು ಮೂಡಿಬರಲಿ ರಾಷ್ಟ್ರ ಮಟ್ಟದಲ್ಲಿ ಮನ್ನಣೆ ಸಿಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಎಚ್.ಜಿ ಶ್ರೀಧರ, ನಮ್ಮಲ್ಲಿ ಮುಖ್ಯವಾಗಿ ಸಂಶೋಧನ ಮನೋಭಾವವಿರಬೇಕು. ಈ ಹುಡುಕಾಟದ ಮನೋಭಾವವಿರುವುದರಿಂದ ನಾವು ಹೊಸ ವಿಷಯಗಳನ್ನು ಕಲಿಯಲು ಸಾಧ್ಯವಾಗುತ್ತದೆ. ಹೊಸದುದನ್ನು ಹುಡುಕುತ್ತಾ ಹೋದಂತೆ ಅನೇಕ ಸೂಕ್ಷ್ಮವಾದ ವಿಚಾರಗಳು ನಮ್ಮ ಗಮನಕ್ಕೆ ಬರುತ್ತದೆ. ಈ ಎಲ್ಲಾ ವಿಚಾರಗಳು ಸಾಹಿತ್ಯದಲ್ಲಿ ನಮ್ಮನ್ನು ಆಳವಾಗಿ ತೊಡಗಿಸಿಕೊಳ್ಳಲು ಸಹಾಯವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೋ.ವಿಷ್ಣು ಗಣಪತಿ ಭಟ್ ಶುಭ ಹಾರೈಸಿದರು. ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ ಎಂ ಅಭಿನಂದನಾ ನುಡಿಗಳನ್ನಾಡಿದರು.ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ್ ನಾಯಕ್ ಅಭಿಪ್ರಾಯ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕೇತರ ವೃಂದ ಹಾಗೂ ಪತ್ರಿಕೋದ್ಯಮ ವಿಭಾಗದಿಂದ ಸಮ್ಮೇಳನಾಧ್ಯಕ್ಷ ಡಾ.ಶ್ರೀಧರ ಎಚ್.ಜಿ ಅವರನ್ನು ಸನ್ಮಾನಿಸಲಾಯಿತು.
ಐಕ್ಯೂಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ.ಎಸ್ ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಗೀತಾ ಕುಮಾರಿ ಟಿ ವಂದಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…