ಹೆಮ್ಮೆಯ ಕನ್ನಡತಿ ಇನ್ಫೋಸಿಸ್ ಫೌಂಡೇಶನ್(Infosis Foudation) ಅಧ್ಯಕ್ಷೆ ಸುಧಾಮೂರ್ತಿ (Sudha Murthy)ಅವರನ್ನು ಮಹಿಳಾ ದಿನಾಚರಣೆಯಂದೇ (Women’s Day) ಕೇಂದ್ರ ಸರ್ಕಾರ(Central govt) ರಾಜ್ಯಸಭೆಗೆ(Rajya sabha) ನಾಮನಿರ್ದೇಶನ ಮಾಡಿದೆ. ಸಮಾಜ ಸೇವೆ(Social work) ಮತ್ತು ಶಿಕ್ಷಣಕ್ಕೆ(Education) ನೀಡಿದ ಅತ್ಯುತ್ತಮ ಕೊಡುಗೆಗೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮನಿರ್ದೇಶನ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ.
ಮೋದಿ ಪೋಸ್ಟ್ನಲ್ಲಿ ಏನಿದೆ? : ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ.
ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಸಿದ್ದಾರೆ. ಈ ಹಿಂದೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗಡೆ ಅವರನ್ನು ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು.
– ಅಂತರ್ಜಾಲ ಮಾಹಿತಿ
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…