ಕಾಂತಾರ ಚಲನಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬುಧವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹಷೇಂದ್ರ ಕುಮಾರ್ ಅವರನ್ನು ಭೇಟಿಯಾದರು.
ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತರಾಗಿ ಇತ್ತೀಚೆಗೆ ಮಂಗಳೂರಿನಲ್ಲಿ “ಕಾಂತಾರ” ಚಲನಚಿತ್ರ ನೋಡಿದ್ದು ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. ಹೆಗ್ಗಡೆಯವರು ರಿಷಬ್ ಶೆಟ್ಟಿ ದಂಪತಿಯನ್ನು ಗೌರವಿಸಿ ಅಭಿನಂದಿಸಿದರು. ನಟ ಪ್ರಮೋದ್ ಶೆಟ್ಟಿ ಕೂಡಾ ಉಪಸ್ಥಿತರಿದ್ದರು.ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಮಾತನಾಡಿ ಇನ್ನು ಎರಡು ತಿಂಗಳು ತೀರ್ಥಯಾತ್ರೆ ಮಾಡುವ ಕಾರ್ಯಕ್ರಮವಿದ್ದು ಬಳಿಕ ಕೊಂಚ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…