ಕರ್ನಾಟಕ ರಾಜ್ಯ ಅಲ್ಲದೇ ದೇಶ ವಿದೇಶದಲ್ಲೂ ಭರ್ಜರಿ ಸದ್ದು ಮಾಡುತ್ತಿರುವ ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನದ ಕಾಂತಾರ ಚಿತ್ರಕ್ಕೆ ನಟ ಚೇತನ್ ಟ್ವೀಟ್ ಮಾಡಿದ್ದು ಭಾರೀ ವಿವಾದವನ್ನು ಸೃಷ್ಟಿಸಿದೆ.
ಕಾಂತಾರ ಚಿತ್ರದ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿಲ್ಲ ಎಂದು ಟ್ವೀಟ್ ಮಾಡಿರುವುದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.
ತಮ್ಮ ಟ್ವೀಟ್ನಲ್ಲಿ ಚೇತನ್ ಅವರು, ನಮ್ಮ ಕನ್ನಡದ ಚಲನಚಿತ್ರ ಕಾಂತಾರವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ.ಇದು ನಿಜವಲ್ಲ.
ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.
ಆದರೆ ಚೇತನ್ ಅವರ ಈ ಟ್ವೀಟ್ಗೆ ನೆಟ್ಟಿಗರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅನೇಕರು ಪ್ರತಿಕ್ರಿಯೆ ನೀಡಿದ್ದು, ಒಂದು ಚಿತ್ರಕ್ಕೆ ಜಾತಿ, ಧರ್ಮ ಲೋಪ ಮಾಡುವುದು ಚೇತನ್ನಂತವರಿಗೆ ಮಾತ್ರ ಬರುತ್ತದೆ ಎಂದು ತಿರುಗೇಟು ಕೊಟ್ಟಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…