Advertisement
ಸುದ್ದಿಗಳು

ನಾ ಕಾರಂತ ಪೆರಾಜೆ ಅವರಿಗೆ ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’ | “ಗಾಂಧಿ ಭಾರತ- ಗ್ರಾಮ ಭಾರತ” ವರದಿಗೆ ಪ್ರಶಸ್ತಿ | ಗುತ್ತಿಗಾರಿನ “ಗ್ರಾಮಭಾರತ” ಸೇವೆಗೆ ಹೆಮ್ಮೆಯ ಗರಿ |

Share

ಸೌಹಾರ್ದತೆ ಮತ್ತು ಮಾನವೀಯ ಮೌಲ್ಯದ ಬದುಕನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ಅಡಿಕೆ ಪತ್ರಿಕೆಯ ನಾ ಕಾರಂತ ಪೆರಾಜೆ ಆಯ್ಕೆಯಾಗಿದ್ದಾರೆ.

ಸುಧಾ ಪತ್ರಿಕೆಯಲ್ಲಿ 2021 ರ ಆಗಸ್ಟ್‌ 11ರಂದು ರಂದು ಪ್ರಕಟಗೊಂಡ ನಾ ಕಾರಂತರ “ಗಾಂಧಿ ಭಾರತ- ಗ್ರಾಮ ಭಾರತ” ಎಂಬ ವರದಿಗೆ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿಯು ರೂ. 5001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿ ಹಿಂದು ಪತ್ರಿಕೆಯ ಸಹಾಯಕ ಸಂಪಾದಕ ಅನಿಲ್‌ ಶಾಸ್ತ್ರಿ, ಪರಿಸರ ಪ್ರೇಮಿ ದಿನೇಶ್‌ ಹೊಳ್ಳ, ಮಂಚಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ವಿಜಯಲಕ್ಷ್ಮಿ ನೇತೃತ್ವದ ಆಯ್ಕೆ ಸಮಿತಿ ಲೇಖನವನ್ನು ಆಯ್ಕೆ ಮಾಡಿದೆ. ಜುಲೈ 1 ರಂದು ಪತ್ರಿಕಾಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರಶ್ಮಿ ಎಸ್.ಆರ್. ‌”ಬ್ರ್ಯಾಂಡ್‌ ಮಂಗಳೂರು” ಪ್ರಶಸ್ತಿ ಪ್ರದಾನ ಮಾಡುವರು, ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಅಧ್ಯಕ್ಷತೆ ವಹಿಸುವರು. ವಿಜಯಕರ್ನಾಟಕ ಪತ್ರಿಕೆಯ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕ ಯು.ಕೆ.ಕುಮಾರನಾಥ್‌ ಅವರು “ಕೋವಿಡ್‌ ನಂತರ ಮಾಧ್ಯಮದ ಸ್ಥಿತ್ಯಂತರ” ಕುರಿತು ಉಪನ್ಯಾಸ ನೀಡಲಿದ್ದಾರೆ.

ಪರಿಚಯ: ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ. ಕಾರಂತ ಪೆರಾಜೆ ಅವರು ನೆಲದ ನಾಡಿ, ತಳಿ ತಪಸ್ವಿ, ಕಾಡು ಮಾವು ಸಹಿತ 20 ಕೃಷಿ ಕೃತಿಗಳು, ಶೇಣಿ ಚಿಂತನ, ಅಮರಾವತಿ ಸಹಿತ 15 ಯಕ್ಷಗಾನದ ಕೃತಿಗಳು, 11 ಸಂಪಾದಿತ ಕೃತಿಗಳು, ಇತರ 3 ಕೃತಿಗಳನ್ನು ರಚಿಸಿದ್ದಾರೆ. ಪರಿಸರ ಪತ್ರಿಕೋದ್ಯಮ ಪ್ರಶಸ್ತಿ, ಚರಕ ಪ್ರಶಸ್ತಿ, ಮುರಘಾಶ್ರೀ ಪ್ರಶಸ್ತಿ, ಪ ಗೋ ಪ್ರಶಸ್ತಿ ಸಹಿತ ಹತ್ತಕ್ಕೂ ಹೆಚ್ಚು ಪ್ರಶಸ್ತಿ ಲಭಿಸಿದೆ. ಪದ್ಮಶ್ರೀ ಹರೇಕಳ ಹಾಜಬ್ಬರ ಬಗೆಗಿನ ‘ಅಕ್ಷರ ಯೋಗಿಯ ನೋಡಲ್ಲಿ’ ಲೇಖನವು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ಹಾಗೂ ದಾವಣಗೆರೆ ವಿಶ್ವವಿದ್ಯಾಲಯಗಳ ವಾಣಿಜ್ಯ ವಿಭಾಗದ ನಾಲ್ಕನೇ ಸೆಮಿಸ್ಟರ್‌ನ ಕನ್ನಡ ಪಠ್ಯದಲ್ಲಿ ಸೇರಿತ್ತು. ಎರಡು ಕೃಷಿ ಸಂಬಂಧಿ ಲೇಖನಗಳು ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಸೇರ್ಪಡೆಗೊಂಡಿದೆ.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ-ಕಮಿಲ ಪ್ರದೇಶದಲ್ಲಿ  ಗ್ರಾಮೀಣ ಜನರೆಲ್ಲಾ ಸೇರಿಕೊಂಡು ತಮ್ಮ ಊರಿನ ಅಭಿವೃದ್ಧಿಗೆ ಕೆಲಸ ಮಾಡಿದ್ದರು. ಗ್ರಾಮಭಾರತ ಎಂಬ ಹೆಸರಿನಲ್ಲಿ ಮೂಲಕ ತಂಡ ಕಟ್ಟಿ ಊರಿನ ಅನೇಕ ವರ್ಷಗಳ ಬೇಡಿಕೆ ಈಡೇರಿಕೆಗೆ ತಾತ್ಕಾಲಿಕ ಸೇತುವೆ ರಚನೆ, ಕುಡಿಯುವ ನೀರಿನ ವ್ಯವಸ್ಥೆ, ಗ್ರಾಮೀಣ ಭಾಗದ ನೆಟ್ವರ್ಕ್‌ ಸಮಸ್ಯೆಗಳಿಗೆ ಸ್ಪಂದನೆ ಇತ್ಯಾದಿಗಳು ಸೇರಿದಂತೆ ಗ್ರಾಮೀಣ ಭಾಗವನ್ನು ಜನರೆಲ್ಲಾ ಸೇರಿ ಅಭಿವೃದ್ಧಿ ಪಡಿಸಲು ಶ್ರಮಿಸಿದ್ದರು. ಇದೇ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್‌ ಚುನಾವಣೆಯಲ್ಲೂ ಪಕ್ಷಾತೀತವಾಗಿ ಸ್ಫರ್ಧಿಸಿ ಕಮಿಲ-ಮೊಗ್ರ ವಾರ್ಡ್‌ ನ 4 ಸ್ಥಾನಗಳನ್ನು ಗೆದ್ದುಕೊಂಡು ಗ್ರಾಮಾಭಿವೃದ್ಧಿ ಮುಂದುವರಿಸಿದ್ದಾರೆ. ಈ ಬಗ್ಗೆ ಸಮಗ್ರ ಲೇಖನವನ್ನು ನಾ.ಕಾರಂತ ಪೆರಾಜೆ ಬರೆದಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

6 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

20 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

20 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

21 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago