ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ

July 26, 2024
11:51 PM

ನಮ್ಮ ವೀರ ಯೋಧರಿಗೆ(Soldier) ಹೆಮ್ಮೆಯಿಂದ ಹೃದಯ ಪೂರ್ವಕ ಪ್ರಣಾಮಗಳನ್ನು ಸಮರ್ಪಣೆ ಗೈದು ಜೈ ಜವಾನ್(Jai jawan) ಅಂತ ಹೇಳೋಣ ಬನ್ನಿ.. ಇಂದು ನಮ್ಮ ದೇಶಕ್ಕಾಗಿ ಅನೇಕ ಸೈನಿಕರು ಪ್ರಾಣ ತ್ಯಾಗ ಮಾಡಿ ಯುದ್ಧ(War) ಗೆದ್ದ ದಿನ. ಜುಲೈ 26 ಕಾರ್ಗಿಲ್ ವಿಜಯ ದಿವಸ(Kargil Vijay Diwas). 1999 ರಲ್ಲಿ ಭಾರತ-ಪಾಕಿಸ್ತಾನದ( India – Pakistan) ನಡುವೆ ನಡೆದ ಯುದ್ಧದಲ್ಲಿ ಭಾರತ ದಿಗ್ವಿಜಯ(victory) ಸಾಧಿಸಿದ ದಿನ ಇದು. 1999 ರ ಮೇ ತಿಂಗಳಿನಿಂದ ಜುಲೈವರೆಗೆ ಸುಮಾರು 60 ದಿನಗಳ ಕಾಲ ನಡೆದ ಯುದ್ಧದಲ್ಲಿ ಭಾರತದ 527 ಸೈನಿಕರು ಹತರಾಗಿದ್ದರು.

ಪಾಕಿಸ್ತಾನ ತನ್ನ 357 ಸೈನಿಕರು ಹತರಾಗಿದ್ದರೆಂದು ವರದಿ ನೀಡಿದ್ದರೂ, ಇದು ಸುಳ್ಳು ಎಂದು ಭಾರತ ತಳ್ಳಿಹಾಕಿತ್ತು. ಏಕೆಂದರೆ ಭಾರತೀಯ ಸೈನಿಕರೇ ಹೇಳುವ ಪ್ರಕಾರ ಪಾಕಿಸ್ತಾನದ ಕನಿಷ್ಠ 1 ಸಾವಿರ ಸೈನಿಕರು ಈ ಯುದ್ಧದಲ್ಲಿ ಹತರಾಗಿದ್ದರು.
ಜಮ್ಮು ಕಾಶ್ಮೀರದ ಲಡಾಕ್ ಜಿಲ್ಲೆಯಲ್ಲಿರುವ ಕಾರ್ಗಿಲ್ ನಲ್ಲಿ ಅಕ್ರಮವಾಗಿ ನುಸುಳಿದ್ದ ಪಾಕಿಸ್ತಾನಿ ಸೇನೆಯನ್ನು ಬಗ್ಗುಬಡಿಯುವ ಕಾರ್ಯಾಚರಣೆಗೆ ಭಾರತ ಇಟ್ಟಿದ್ದ ಹೆಸರು ‘ಆಪರೇಷನ್ ವಿಜಯ’. ಅದಕ್ಕೆಂದೇ ಈ ಯುದ್ಧದಲ್ಲಿ ಭಾರತ ಗೆಲುವು ಸಾಧಿಸಿದ ದಿನವಾದ ಜುಲೈ 26 ಅನ್ನು ಕಾರ್ಗಿಲ್ ವಿಜಯ ದಿವಸ ಎಂದು ಕರೆಯಲಾಗುತ್ತದೆ.

ಜುಲೈ 26, 1999, ಪಾಕಿಸ್ತಾನದೊಂದಿಗೆ ಕಾರ್ಗಿಲ್ ಸಂಘರ್ಷದಲ್ಲಿ ಭಾರತವು ಅದ್ಭುತ ಗೆಲುವು ಸಾಧಿಸಿತು. 1999 ರಿಂದ ಪ್ರತಿ ವರ್ಷ ಜುಲೈ 26 ನ್ನು “ಕಾರ್ಗಿಲ್ ವಿಜಯ್ ದಿವಸ್” ಎಂದು ಆಚರಿಸಲಾಗುತ್ತದೆ. ಯುದ್ಧದಲ್ಲಿ ಭಾರತದ ಜಯವನ್ನು ಈ ದಿವಸ ನಮ್ಮ ನೆನಪಿಗೆ ತರುತ್ತದೆ ಮತ್ತು ಭಾರತೀಯ ಸೈನಿಕ ಯೋಧರು ಮಾಡಿದ ತ್ಯಾಗವನ್ನು ನಾವು ನೆನಪಿಸಿಕೊಳ್ಳುತ್ತೇವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror