ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ

July 26, 2024
11:51 PM

ನಮ್ಮ ವೀರ ಯೋಧರಿಗೆ(Soldier) ಹೆಮ್ಮೆಯಿಂದ ಹೃದಯ ಪೂರ್ವಕ ಪ್ರಣಾಮಗಳನ್ನು ಸಮರ್ಪಣೆ ಗೈದು ಜೈ ಜವಾನ್(Jai jawan) ಅಂತ ಹೇಳೋಣ ಬನ್ನಿ.. ಇಂದು ನಮ್ಮ ದೇಶಕ್ಕಾಗಿ ಅನೇಕ ಸೈನಿಕರು ಪ್ರಾಣ ತ್ಯಾಗ ಮಾಡಿ ಯುದ್ಧ(War) ಗೆದ್ದ ದಿನ. ಜುಲೈ 26 ಕಾರ್ಗಿಲ್ ವಿಜಯ ದಿವಸ(Kargil Vijay Diwas). 1999 ರಲ್ಲಿ ಭಾರತ-ಪಾಕಿಸ್ತಾನದ( India – Pakistan) ನಡುವೆ ನಡೆದ ಯುದ್ಧದಲ್ಲಿ ಭಾರತ ದಿಗ್ವಿಜಯ(victory) ಸಾಧಿಸಿದ ದಿನ ಇದು. 1999 ರ ಮೇ ತಿಂಗಳಿನಿಂದ ಜುಲೈವರೆಗೆ ಸುಮಾರು 60 ದಿನಗಳ ಕಾಲ ನಡೆದ ಯುದ್ಧದಲ್ಲಿ ಭಾರತದ 527 ಸೈನಿಕರು ಹತರಾಗಿದ್ದರು.

ಪಾಕಿಸ್ತಾನ ತನ್ನ 357 ಸೈನಿಕರು ಹತರಾಗಿದ್ದರೆಂದು ವರದಿ ನೀಡಿದ್ದರೂ, ಇದು ಸುಳ್ಳು ಎಂದು ಭಾರತ ತಳ್ಳಿಹಾಕಿತ್ತು. ಏಕೆಂದರೆ ಭಾರತೀಯ ಸೈನಿಕರೇ ಹೇಳುವ ಪ್ರಕಾರ ಪಾಕಿಸ್ತಾನದ ಕನಿಷ್ಠ 1 ಸಾವಿರ ಸೈನಿಕರು ಈ ಯುದ್ಧದಲ್ಲಿ ಹತರಾಗಿದ್ದರು.
ಜಮ್ಮು ಕಾಶ್ಮೀರದ ಲಡಾಕ್ ಜಿಲ್ಲೆಯಲ್ಲಿರುವ ಕಾರ್ಗಿಲ್ ನಲ್ಲಿ ಅಕ್ರಮವಾಗಿ ನುಸುಳಿದ್ದ ಪಾಕಿಸ್ತಾನಿ ಸೇನೆಯನ್ನು ಬಗ್ಗುಬಡಿಯುವ ಕಾರ್ಯಾಚರಣೆಗೆ ಭಾರತ ಇಟ್ಟಿದ್ದ ಹೆಸರು ‘ಆಪರೇಷನ್ ವಿಜಯ’. ಅದಕ್ಕೆಂದೇ ಈ ಯುದ್ಧದಲ್ಲಿ ಭಾರತ ಗೆಲುವು ಸಾಧಿಸಿದ ದಿನವಾದ ಜುಲೈ 26 ಅನ್ನು ಕಾರ್ಗಿಲ್ ವಿಜಯ ದಿವಸ ಎಂದು ಕರೆಯಲಾಗುತ್ತದೆ.

ಜುಲೈ 26, 1999, ಪಾಕಿಸ್ತಾನದೊಂದಿಗೆ ಕಾರ್ಗಿಲ್ ಸಂಘರ್ಷದಲ್ಲಿ ಭಾರತವು ಅದ್ಭುತ ಗೆಲುವು ಸಾಧಿಸಿತು. 1999 ರಿಂದ ಪ್ರತಿ ವರ್ಷ ಜುಲೈ 26 ನ್ನು “ಕಾರ್ಗಿಲ್ ವಿಜಯ್ ದಿವಸ್” ಎಂದು ಆಚರಿಸಲಾಗುತ್ತದೆ. ಯುದ್ಧದಲ್ಲಿ ಭಾರತದ ಜಯವನ್ನು ಈ ದಿವಸ ನಮ್ಮ ನೆನಪಿಗೆ ತರುತ್ತದೆ ಮತ್ತು ಭಾರತೀಯ ಸೈನಿಕ ಯೋಧರು ಮಾಡಿದ ತ್ಯಾಗವನ್ನು ನಾವು ನೆನಪಿಸಿಕೊಳ್ಳುತ್ತೇವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror