ನಮ್ಮ ವೀರ ಯೋಧರಿಗೆ(Soldier) ಹೆಮ್ಮೆಯಿಂದ ಹೃದಯ ಪೂರ್ವಕ ಪ್ರಣಾಮಗಳನ್ನು ಸಮರ್ಪಣೆ ಗೈದು ಜೈ ಜವಾನ್(Jai jawan) ಅಂತ ಹೇಳೋಣ ಬನ್ನಿ.. ಇಂದು ನಮ್ಮ ದೇಶಕ್ಕಾಗಿ ಅನೇಕ ಸೈನಿಕರು ಪ್ರಾಣ ತ್ಯಾಗ ಮಾಡಿ ಯುದ್ಧ(War) ಗೆದ್ದ ದಿನ. ಜುಲೈ 26 ಕಾರ್ಗಿಲ್ ವಿಜಯ ದಿವಸ(Kargil Vijay Diwas). 1999 ರಲ್ಲಿ ಭಾರತ-ಪಾಕಿಸ್ತಾನದ( India – Pakistan) ನಡುವೆ ನಡೆದ ಯುದ್ಧದಲ್ಲಿ ಭಾರತ ದಿಗ್ವಿಜಯ(victory) ಸಾಧಿಸಿದ ದಿನ ಇದು. 1999 ರ ಮೇ ತಿಂಗಳಿನಿಂದ ಜುಲೈವರೆಗೆ ಸುಮಾರು 60 ದಿನಗಳ ಕಾಲ ನಡೆದ ಯುದ್ಧದಲ್ಲಿ ಭಾರತದ 527 ಸೈನಿಕರು ಹತರಾಗಿದ್ದರು.
ಪಾಕಿಸ್ತಾನ ತನ್ನ 357 ಸೈನಿಕರು ಹತರಾಗಿದ್ದರೆಂದು ವರದಿ ನೀಡಿದ್ದರೂ, ಇದು ಸುಳ್ಳು ಎಂದು ಭಾರತ ತಳ್ಳಿಹಾಕಿತ್ತು. ಏಕೆಂದರೆ ಭಾರತೀಯ ಸೈನಿಕರೇ ಹೇಳುವ ಪ್ರಕಾರ ಪಾಕಿಸ್ತಾನದ ಕನಿಷ್ಠ 1 ಸಾವಿರ ಸೈನಿಕರು ಈ ಯುದ್ಧದಲ್ಲಿ ಹತರಾಗಿದ್ದರು.
ಜಮ್ಮು ಕಾಶ್ಮೀರದ ಲಡಾಕ್ ಜಿಲ್ಲೆಯಲ್ಲಿರುವ ಕಾರ್ಗಿಲ್ ನಲ್ಲಿ ಅಕ್ರಮವಾಗಿ ನುಸುಳಿದ್ದ ಪಾಕಿಸ್ತಾನಿ ಸೇನೆಯನ್ನು ಬಗ್ಗುಬಡಿಯುವ ಕಾರ್ಯಾಚರಣೆಗೆ ಭಾರತ ಇಟ್ಟಿದ್ದ ಹೆಸರು ‘ಆಪರೇಷನ್ ವಿಜಯ’. ಅದಕ್ಕೆಂದೇ ಈ ಯುದ್ಧದಲ್ಲಿ ಭಾರತ ಗೆಲುವು ಸಾಧಿಸಿದ ದಿನವಾದ ಜುಲೈ 26 ಅನ್ನು ಕಾರ್ಗಿಲ್ ವಿಜಯ ದಿವಸ ಎಂದು ಕರೆಯಲಾಗುತ್ತದೆ.
ಜುಲೈ 26, 1999, ಪಾಕಿಸ್ತಾನದೊಂದಿಗೆ ಕಾರ್ಗಿಲ್ ಸಂಘರ್ಷದಲ್ಲಿ ಭಾರತವು ಅದ್ಭುತ ಗೆಲುವು ಸಾಧಿಸಿತು. 1999 ರಿಂದ ಪ್ರತಿ ವರ್ಷ ಜುಲೈ 26 ನ್ನು “ಕಾರ್ಗಿಲ್ ವಿಜಯ್ ದಿವಸ್” ಎಂದು ಆಚರಿಸಲಾಗುತ್ತದೆ. ಯುದ್ಧದಲ್ಲಿ ಭಾರತದ ಜಯವನ್ನು ಈ ದಿವಸ ನಮ್ಮ ನೆನಪಿಗೆ ತರುತ್ತದೆ ಮತ್ತು ಭಾರತೀಯ ಸೈನಿಕ ಯೋಧರು ಮಾಡಿದ ತ್ಯಾಗವನ್ನು ನಾವು ನೆನಪಿಸಿಕೊಳ್ಳುತ್ತೇವೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…
ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…
ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ ಕಲಬುರಗಿಯಲ್ಲಿ …
ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ ಧನ ಸಹಾಯ ನೀಡುವುದು ಮತ್ತು ರೈತರ…
ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು…
ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.