ನಮ್ಮ ವೀರ ಯೋಧರಿಗೆ(Soldier) ಹೆಮ್ಮೆಯಿಂದ ಹೃದಯ ಪೂರ್ವಕ ಪ್ರಣಾಮಗಳನ್ನು ಸಮರ್ಪಣೆ ಗೈದು ಜೈ ಜವಾನ್(Jai jawan) ಅಂತ ಹೇಳೋಣ ಬನ್ನಿ.. ಇಂದು ನಮ್ಮ ದೇಶಕ್ಕಾಗಿ ಅನೇಕ ಸೈನಿಕರು ಪ್ರಾಣ ತ್ಯಾಗ ಮಾಡಿ ಯುದ್ಧ(War) ಗೆದ್ದ ದಿನ. ಜುಲೈ 26 ಕಾರ್ಗಿಲ್ ವಿಜಯ ದಿವಸ(Kargil Vijay Diwas). 1999 ರಲ್ಲಿ ಭಾರತ-ಪಾಕಿಸ್ತಾನದ( India – Pakistan) ನಡುವೆ ನಡೆದ ಯುದ್ಧದಲ್ಲಿ ಭಾರತ ದಿಗ್ವಿಜಯ(victory) ಸಾಧಿಸಿದ ದಿನ ಇದು. 1999 ರ ಮೇ ತಿಂಗಳಿನಿಂದ ಜುಲೈವರೆಗೆ ಸುಮಾರು 60 ದಿನಗಳ ಕಾಲ ನಡೆದ ಯುದ್ಧದಲ್ಲಿ ಭಾರತದ 527 ಸೈನಿಕರು ಹತರಾಗಿದ್ದರು.
ಪಾಕಿಸ್ತಾನ ತನ್ನ 357 ಸೈನಿಕರು ಹತರಾಗಿದ್ದರೆಂದು ವರದಿ ನೀಡಿದ್ದರೂ, ಇದು ಸುಳ್ಳು ಎಂದು ಭಾರತ ತಳ್ಳಿಹಾಕಿತ್ತು. ಏಕೆಂದರೆ ಭಾರತೀಯ ಸೈನಿಕರೇ ಹೇಳುವ ಪ್ರಕಾರ ಪಾಕಿಸ್ತಾನದ ಕನಿಷ್ಠ 1 ಸಾವಿರ ಸೈನಿಕರು ಈ ಯುದ್ಧದಲ್ಲಿ ಹತರಾಗಿದ್ದರು.
ಜಮ್ಮು ಕಾಶ್ಮೀರದ ಲಡಾಕ್ ಜಿಲ್ಲೆಯಲ್ಲಿರುವ ಕಾರ್ಗಿಲ್ ನಲ್ಲಿ ಅಕ್ರಮವಾಗಿ ನುಸುಳಿದ್ದ ಪಾಕಿಸ್ತಾನಿ ಸೇನೆಯನ್ನು ಬಗ್ಗುಬಡಿಯುವ ಕಾರ್ಯಾಚರಣೆಗೆ ಭಾರತ ಇಟ್ಟಿದ್ದ ಹೆಸರು ‘ಆಪರೇಷನ್ ವಿಜಯ’. ಅದಕ್ಕೆಂದೇ ಈ ಯುದ್ಧದಲ್ಲಿ ಭಾರತ ಗೆಲುವು ಸಾಧಿಸಿದ ದಿನವಾದ ಜುಲೈ 26 ಅನ್ನು ಕಾರ್ಗಿಲ್ ವಿಜಯ ದಿವಸ ಎಂದು ಕರೆಯಲಾಗುತ್ತದೆ.
ಜುಲೈ 26, 1999, ಪಾಕಿಸ್ತಾನದೊಂದಿಗೆ ಕಾರ್ಗಿಲ್ ಸಂಘರ್ಷದಲ್ಲಿ ಭಾರತವು ಅದ್ಭುತ ಗೆಲುವು ಸಾಧಿಸಿತು. 1999 ರಿಂದ ಪ್ರತಿ ವರ್ಷ ಜುಲೈ 26 ನ್ನು “ಕಾರ್ಗಿಲ್ ವಿಜಯ್ ದಿವಸ್” ಎಂದು ಆಚರಿಸಲಾಗುತ್ತದೆ. ಯುದ್ಧದಲ್ಲಿ ಭಾರತದ ಜಯವನ್ನು ಈ ದಿವಸ ನಮ್ಮ ನೆನಪಿಗೆ ತರುತ್ತದೆ ಮತ್ತು ಭಾರತೀಯ ಸೈನಿಕ ಯೋಧರು ಮಾಡಿದ ತ್ಯಾಗವನ್ನು ನಾವು ನೆನಪಿಸಿಕೊಳ್ಳುತ್ತೇವೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…