ನಮ್ಮ ವೀರ ಯೋಧರಿಗೆ(Soldier) ಹೆಮ್ಮೆಯಿಂದ ಹೃದಯ ಪೂರ್ವಕ ಪ್ರಣಾಮಗಳನ್ನು ಸಮರ್ಪಣೆ ಗೈದು ಜೈ ಜವಾನ್(Jai jawan) ಅಂತ ಹೇಳೋಣ ಬನ್ನಿ.. ಇಂದು ನಮ್ಮ ದೇಶಕ್ಕಾಗಿ ಅನೇಕ ಸೈನಿಕರು ಪ್ರಾಣ ತ್ಯಾಗ ಮಾಡಿ ಯುದ್ಧ(War) ಗೆದ್ದ ದಿನ. ಜುಲೈ 26 ಕಾರ್ಗಿಲ್ ವಿಜಯ ದಿವಸ(Kargil Vijay Diwas). 1999 ರಲ್ಲಿ ಭಾರತ-ಪಾಕಿಸ್ತಾನದ( India – Pakistan) ನಡುವೆ ನಡೆದ ಯುದ್ಧದಲ್ಲಿ ಭಾರತ ದಿಗ್ವಿಜಯ(victory) ಸಾಧಿಸಿದ ದಿನ ಇದು. 1999 ರ ಮೇ ತಿಂಗಳಿನಿಂದ ಜುಲೈವರೆಗೆ ಸುಮಾರು 60 ದಿನಗಳ ಕಾಲ ನಡೆದ ಯುದ್ಧದಲ್ಲಿ ಭಾರತದ 527 ಸೈನಿಕರು ಹತರಾಗಿದ್ದರು.
ಪಾಕಿಸ್ತಾನ ತನ್ನ 357 ಸೈನಿಕರು ಹತರಾಗಿದ್ದರೆಂದು ವರದಿ ನೀಡಿದ್ದರೂ, ಇದು ಸುಳ್ಳು ಎಂದು ಭಾರತ ತಳ್ಳಿಹಾಕಿತ್ತು. ಏಕೆಂದರೆ ಭಾರತೀಯ ಸೈನಿಕರೇ ಹೇಳುವ ಪ್ರಕಾರ ಪಾಕಿಸ್ತಾನದ ಕನಿಷ್ಠ 1 ಸಾವಿರ ಸೈನಿಕರು ಈ ಯುದ್ಧದಲ್ಲಿ ಹತರಾಗಿದ್ದರು.
ಜಮ್ಮು ಕಾಶ್ಮೀರದ ಲಡಾಕ್ ಜಿಲ್ಲೆಯಲ್ಲಿರುವ ಕಾರ್ಗಿಲ್ ನಲ್ಲಿ ಅಕ್ರಮವಾಗಿ ನುಸುಳಿದ್ದ ಪಾಕಿಸ್ತಾನಿ ಸೇನೆಯನ್ನು ಬಗ್ಗುಬಡಿಯುವ ಕಾರ್ಯಾಚರಣೆಗೆ ಭಾರತ ಇಟ್ಟಿದ್ದ ಹೆಸರು ‘ಆಪರೇಷನ್ ವಿಜಯ’. ಅದಕ್ಕೆಂದೇ ಈ ಯುದ್ಧದಲ್ಲಿ ಭಾರತ ಗೆಲುವು ಸಾಧಿಸಿದ ದಿನವಾದ ಜುಲೈ 26 ಅನ್ನು ಕಾರ್ಗಿಲ್ ವಿಜಯ ದಿವಸ ಎಂದು ಕರೆಯಲಾಗುತ್ತದೆ.
ಜುಲೈ 26, 1999, ಪಾಕಿಸ್ತಾನದೊಂದಿಗೆ ಕಾರ್ಗಿಲ್ ಸಂಘರ್ಷದಲ್ಲಿ ಭಾರತವು ಅದ್ಭುತ ಗೆಲುವು ಸಾಧಿಸಿತು. 1999 ರಿಂದ ಪ್ರತಿ ವರ್ಷ ಜುಲೈ 26 ನ್ನು “ಕಾರ್ಗಿಲ್ ವಿಜಯ್ ದಿವಸ್” ಎಂದು ಆಚರಿಸಲಾಗುತ್ತದೆ. ಯುದ್ಧದಲ್ಲಿ ಭಾರತದ ಜಯವನ್ನು ಈ ದಿವಸ ನಮ್ಮ ನೆನಪಿಗೆ ತರುತ್ತದೆ ಮತ್ತು ಭಾರತೀಯ ಸೈನಿಕ ಯೋಧರು ಮಾಡಿದ ತ್ಯಾಗವನ್ನು ನಾವು ನೆನಪಿಸಿಕೊಳ್ಳುತ್ತೇವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…