ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಕೋರ್ಟ್ರಸ್ತೆ ಮುಳಿಯ ಜ್ಯುವೆಲ್ಸ್ನಲ್ಲಿ 15 ದಿನಗಳ ಕಾಲ ನಡೆಯಲಿರುವ `ಕರಿಮಣಿ ಉತ್ಸವ’ಕ್ಕೆ ಫೆ.15ರಂದು ಚಾಲನೆ ದೊರೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಅವರು ಕರಿಮಣಿ ಉತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಾಂಗಲ್ಯದಲ್ಲಿ ಮಂಗಳ ಶಬ್ದವಿದೆ. ಮಂಗಳವನ್ನು ಕರುಣಿಸುವಂತ ದ್ರವ್ಯದಿಂದ ತಯಾರಿಸಲ್ಪಟ್ಟ ವಿಶೇಷವಾಗಿ ಚಿನ್ನದಿಂದ ತಯಾರಿಸಿದ ಕರಿಮಣಿ ಧಾರಣೆ ಮಾಡಿದರೆ ಸೌಭಾಗ್ಯ, ಸಮೃದ್ಧಿ ಪ್ರಾಪ್ತಿಯಾಗುತ್ತದೆ. ಮಂಗಳಸೂತ್ರವನ್ನು ಧರಿಸದಾಗಲೇ ಮುತ್ತೈದೆ ಭಾಗ್ಯದ ಜೊತೆಗೆ ಗೃಹಣಿಗೆ ಸಂಸ್ಕಾರ ದೊರೆಯುತ್ತದೆ. ಇಂತಹ ಕರಿಮಣಿಗಳು ಮುಳಿಯದಲ್ಲಿ 2 ಗ್ರಾಂನಿಂದ ಪ್ರಾರಂಭಿಸಿ ಅತ್ಯಧಿಕ ಚಿನ್ನದ ತನಕ ಗ್ರಾಹಕರಿಗೆ ದೊರೆಯಲಿದೆ. ಕನಿಷ್ಠ 2 ಗ್ರಾಂನ ಕರಿಮಣಿಯ ಮೂಲಕ ಬೆಳ್ಳಿಯ ಕರಿಮಣಿ ಧರಿಸುವ ಬಡವರಿಗೂ ಚಿನ್ನದ ಧರಿಸುವಂತ ಅವಕಾಶ ಮುಳಿಯ ಜ್ಯುವೆಲ್ಸ್ ಮೂಲಕ ದೊರೆಯಲಿದೆ. ಸಂಸ್ಥೆಯ ಶಾಖೆಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ . ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆಗಳು ದೊರೆಯಲಿ ಎಂದರು.
ಮುಳಿಯ ಜ್ಯುವೆಲ್ಸ್ನ , ಚೇರ್ಮೆನ್ ಮತ್ತು ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ ಮಾತನಾಡಿ, ಚಿನ್ನಾಭರಣಗಳ ಮಾರುಕಟ್ಟೆಯಲ್ಲಿ ಹಲವು ಹೊಸತನಗಳನ್ನು ಮುಳಿಯ ಜ್ಯುವೆಲ್ಸ್ ಸಂಸ್ಥೆ ಪರಿಚಯಿಸಿದೆ. 25 ವರ್ಷಗಳ ಹಿಂದೆ ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಪ್ರಥಮ ಬಾರಿಗೆ ಪುತ್ತೂರಿನಲ್ಲಿ ಆಯೋಜಿಸಿದೆ. ಆಧುನಿಕತೆಯಲ್ಲಿ ಮಹಿಳೆಯರಿಗೆ ವಿವಿಧ ಕಾರ್ಯಕ್ರಗಳಿಗೆ ತಕ್ಕಂತೆ ಅವರವರ ಮನದಿಚ್ಚೆಯ ಕರಿಮಣಿಗಳನ್ನು ಧರಿಸಲು ಅವಕಾಶವಿದೆ. ಸುಮಾರು 1000 ರಕ್ಕೂ ಅಧಿಕ ಕರಿಮಣಿ ಸರಗಳ ಸಂಗ್ರಹ ಈ ಸಂದರ್ಭದಲ್ಲಿ ಲಭ್ಯವಾಗಲಿದ್ದು 50 ಕ್ಕೂ ಅಧಿಕ ಆಕರ್ಷಣೀಯ ವಿನ್ಯಾಸಗಳ ಕರಿಮಣಿಗಳು ಲಭ್ಯವಿದೆ. ಇದಕ್ಕಾಗಿ ಕರಿಮಣಿ ಉತ್ಸವದ ಮೂಲಕ ಹೊಸ ಹೊಸ ಶೈಲಿಯ, ಆಕರ್ಷಕ ವಿನ್ಯಾಸದ ಕರಿಮಣಿ ಉತ್ಸವದಲ್ಲಿ ಲಭ್ಯವಿದ್ದು ಫೆ.15ರಿಂದ ಪ್ರಾರಂಭಗೊಂಡು ಫೆ.29ರ ತನಕ ನಡೆಯಲಿದ್ದು ಗ್ರಾಹಕರು ಇದರ ಸದುಪಯೋಗಹ ಪಡೆದುಕೊಳ್ಳುವಂತೆ ಅವರು ವಿನಂತಿಸಿದರು.
ಮುಳಿಯ ಜ್ಯುವೆಲ್ಸ್ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ, ಶೋರೂಂ ವ್ಯವಸ್ಥಾಪಕ ರಾಘವೇಂದ್ರ ಪಾಟೀಲ್, ಮಾರ್ಕೆಟಿಂಗ್ ಮ್ಯಾನೇಜರ್ ಸಂಜೀವ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಭವ್ಯಶ್ರೀ ಪ್ರಾರ್ಥಿಸಿದರು. ಯತೀಶ್ ಆಚಾರ್ಯ ಸ್ವಾಗತಿಸಿರು. ಆನಂದ ಕುಲಾಲ್ ವಂದಿಸಿದರು. ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.
ಫೆ.16ರಿಂದ ಪ್ರಾರಂಭಗೊಂಡಿರುವ ಕರಿಮಣಿ ಉತ್ಸವವು ಫೆ.29ರ ತನಕ ನಡೆಯಲಿದ್ದು ಇದರಲ್ಲಿ ನವನವೀನ ಮಾದರಿಯ, ವಿವಿಧ ವಿನ್ಯಾಸ ಕರಿಮಣಿ ಸರಗಳು ಅತೀ ಕಡಿಮೆ ಸುಮಾರು 2 ಗ್ರಾಂ ನಿಂದ ಪ್ರಾರಂಭಿಸಿ ಗ್ರಾಹಕರ ಆವಶ್ಯಕತೆಗೆ ತಕ್ಕಂತೆ ಎಲ್ಲಾ ರೀತಿಯ ಕರಿಮಣಿ ಸರಗಳು ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…
ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…