Advertisement
MIRROR FOCUS

ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ಮನೆಯಲ್ಲಿಯೇ ಆಧಾರ್ ಅಪ್ಡೇಟ್‌ | ಮಾದರಿಯಾದ ಅಂಚೆ ಇಲಾಖೆಯ ಸೇವೆ |

Share

ಕಾರ್ಕಳದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬವೊಂದರ ಮನೆ ಬಾಗಿಲಿಗೆ ತೆರಳಿ ಆಧಾರ್ ನವೀಕರಣ ಸೇವೆಯನ್ನು ಒದಗಿಸಿದ ಕಾರ್ಕಳ ಮತ್ತು ಪುತ್ತೂರು ಅಂಚೆ ವಿಭಾಗದ ಅಂಚೆ ಅಧಿಕಾರಿಗಳು ವ್ಯಾಪಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಾರ್ಕಳದ ಅಂಚೆ ಸಿಬ್ಬಂದಿಯ ಮಾದರಿ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಂಚೆ ಜನ ಸಂಪರ್ಕ ಅಭಿಯಾನದಡಿ ಪುತ್ತೂರು ಅಂಚೆ ವಿಭಾಗದಿಂದ ಅನಾರೋಗ್ಯ ಪೀಡಿತ ಬಾಲಕಿಯ ಮನೆಗೆ ತೆರಳಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಮಾಡಲಾಗಿದೆ. ಒಟ್ಟು 317 ಅಶಕ್ತರ ಮನೆ ಬಾಗಿಲಿಗೆ ಹೋಗಿ ಈ  ಸೇವೆ ನೀಡಲಾಗಿದೆ. ಮರ್ಣೆ ಗ್ರಾಮದ ದಿನೇಶ್ ಹಾಗೂ ಉಷಾ ದಂಪತಿಯ 10 ವರ್ಷದ ಮಗಳು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು, ಇವರ ಮನೆಗೆ ತೆರಳಿದ ತಂಡ ಆಧಾರ್ ಬಯೋಮೆಟ್ರಿಕ್ ನವೀಕರಣ ಹಾಗೂ ವಿಳಾಸ ತಿದ್ದುಪಡಿ ಮಾಡಿದೆ.ಈ ಜನೋಪಯೋಗಿ ಸೇವೆಗೆ ಸ್ಥಳೀಯರು ಹಾಗೂ ಜನಪ್ರತಿನಿಧಿಗಳು ಮೆಚ್ಚುಗೆ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಫೋಸ್ಟ್ ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.‌ ಅಂಚೆ ಸಿಬ್ಬಂದಿಯ ಮಾದರಿ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದು, ಅಂಚೆ ಇಲಾಖೆಯ ಅತ್ಯುತ್ತಮ ಸೇವಾ ಯೋಜನೆಗಳು ಮತ್ತಷ್ಟು ಜನರಿಗೆ ತಲುಪವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

ಕಾರ್ಕಳದ  ದೊಂಬರಪಲ್ಕೆಯ 10 ವರ್ಷದ ಬಾಲಕಿ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದಳು. ಆಕೆಯ ತಾಯಿಯೂ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಕುಟುಂಬ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಅವರು ತಮ್ಮ ಆಧಾರ್ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸಬೇಕಾಗಿತ್ತು ಹಾಗೂ ಅವರ ವಿಳಾಸವನ್ನು ಸರಿಪಡಿಸಬೇಕಾಗಿತ್ತು ಆದರೆ ಅವರ ಆರೋಗ್ಯ ಸ್ಥಿತಿಯ ಕಾರಣದಿಂದಾಗಿ ಅಂಚೆ ಕಚೇರಿಗೆ ಭೇಟಿ ನೀಡಲು ಸಾಧ್ಯವಾಗಲಿಲ್ಲ.

ಹೀಗಾಗಿ ಕುಟುಂಬವು ಕಾರ್ಕಳ ಪ್ರಧಾನ ಅಂಚೆ ಕಚೇರಿಯನ್ನು ಸಂಪರ್ಕಿಸಿ, ಆಧಾರ್ ನವೀಕರಣಕ್ಕಾಗಿ ಮನೆಯ ಸಹಾಯವನ್ನು ಕೋರಿತ್ತು. ಬಳಿಕ ಪುತ್ತೂರು ಅಂಚೆ ವಿಭಾಗದ ಮಾರ್ಕೆಟಿಂಗ್ ತಂಡವು ಯಂತ್ರಗಳೊಂದಿಗೆ ಕುಟುಂಬದ ಮನೆಗೆ ಭೇಟಿ ನೀಡಿ ಅಗತ್ಯ ಬಯೋಮೆಟ್ರಿಕ್ ನವೀಕರಣಗಳು ಮತ್ತು ವಿಳಾಸ ತಿದ್ದುಪಡಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತು.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕಾರ್ಯಕ್ರಮದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅಂಚೆ ಅಧಿಕಾರಿಗಳ ಸೇವೆಯನ್ನು ಶ್ಲಾಘಿಸಿದ್ದಾರೆ.

“Hats off to the postal officials of Karkala and Puttur divisions for going above and beyond in their duties, delivering Aadhaar updates to a sick family’s doorstep. Their dedication and compassion is truly commendable. #PostalService #AadhaarUpdate #Karkala #Puttur”

The postal officials of Karkala and Puttur postal divisions are receiving widespread praise for their exemplary service in providing Aadhaar updates directly to the home of a family in Karkala who are suffering from illness.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

13 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

13 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

13 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

14 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

1 day ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago