Advertisement
City mirror

ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ವಿಧಾನಸೌಧ ಚಲೋ ಬೆಂಬಲಿಸಿ ಪ್ರತಿಭಟನಾ ಪ್ರದರ್ಶನ

Share
ರೈತ ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳ ವಾಪಸಾತಿಗಾಗಿ,ಕಾರ್ಮಿಕರ ಹಕ್ಕುಗಳ ಸಂರಕ್ಷಣೆಗಾಗಿ, ಕೋವಿಡ್ ಸಂಕಷ್ಟದ ಪರಿಹಾರಕ್ಕಾಗಿ,15 ಅಂಶಗಳ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದ ಕಾರ್ಮಿಕ ವರ್ಗ ಹಮ್ಮಿಕೊಂಡಿರುವ ವಿಧಾನಸೌಧ ಚಲೋ ಕಾರ್ಯಕ್ರಮವನ್ನು  ಬೆಂಬಲಿಸಿ, ಸಿಐಟಿಯು ನೇತೃತ್ವದಲ್ಲಿ ಮಂಗಳೂರಿನಲ್ಲಿ  ಮಿನಿ ವಿಧಾನಸೌಧದ ಎದುರು ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದಸಿಐಟಿಯು ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿ , ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಮಿಕ ವರ್ಗದ ಮೇಲೆ ನಡೆಸುತ್ತಿರುವ ಧಾಳಿಗಳನ್ನು ವಿವರಿಸಿದರು.ಕೃಷಿ,ಸಾರ್ವಜನಿಕ ಕ್ಷೇತ್ರ ಮತ್ತು ಸೇವೆಗಳನ್ನು ಕಾರ್ಪೋರೇಟ್ ಕಂಪೆನಿಗಳ ಲಾಭಕೋರತನಕ್ಕೆ ಬದಲಾಯಿಸಲಾಗುತ್ತಿದೆ.ಕೃಷಿ ಮಸೂದೆ ರೈತ ವಿರೋಧಿಕೃಷಿ,ಸಾರ್ವಜನಿಕ ಕ್ಷೇತ್ರ ಮತ್ತು ಸೇವೆಗಳನ್ನು ಕಾರ್ಪೋರೇಟ್ ಕಂಪೆನಿಗಳ ಲಾಭಕೋರತನಕ್ಕೆ ಬದಲಾಯಿಸಲಾಗುತ್ತಿದೆ. ಆದೇಶ, ಸುಗ್ರೀವಾಜ್ಞೆಗಳ ಮೂಲಕ ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸುವುದು,ಅಮಾನತುಗೊಳಿಸುವುದು ಹೆಚ್ಚುತ್ತಿದೆ. ಜನತೆಯ ಹಕ್ಕುಗಳನ್ನು, ಪ್ರತಿಭಟಿಸುವುದನ್ನು ಹತ್ತಿಕ್ಕಲಾಗುತ್ತಿದೆ.ಜನಪರ ಹೋರಾಟಗಾರರ ಮೇಲಿನ ಕೇಸುಗಳು ಹಾಗೂ ಕಿರುಕುಳ ಹೆಚ್ಚುತ್ತಿದೆ. ಒಟ್ಟಿನಲ್ಲಿ ದೇಶ ಸರ್ವಾಧಿಕಾರಿ ನಡೆಯತ್ತ, ಫ್ಯಾಸಿಸ್ಟ್ ಮನೋಭಾವದತ್ತ ಸಾಗುತ್ತಿರುವುದು ಅತ್ಯಂತ ಅಪಾಯಕಾರಿಯಾಗಿದ್ದು,ದೇಶವನ್ನು ಉಳಿಸಲು ಕಾರ್ಮಿಕ ವರ್ಗ ಒಂದಾಗಿ ಹೋರಾಡಬೇಕಾಗಿದೆ ಎಂದು ಹೇಳಿದರು
ಕರ್ನಾಟಕ ಪ್ರಾಂತ ರೈತ ಸಂಘದ ದ.ಕ.ಜಿಲ್ಲಾಧ್ಯಕ್ಷರಾದ ಕೃಷ್ಣಪ್ಪ ಸಾಲ್ಯಾನ್ ಮಾತನಾಡಿದರು. ಪ್ರಾಸ್ತಾವಿಕವಾಗಿ ಸಿಐಟಿಯು  ದಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಮುಖಂಡರಾದ ಯು.ಬಿ.ಲೋಕಯ್ಯ,ಪದ್ಮಾವತಿ ಶೆಟ್ಟಿ, ಗಂಗಯ್ಯ ಅಮೀನ್, ಜಯಂತಿ ಶೆಟ್ಟಿ, ಬಾಬು ದೇವಾಡಿಗ,ಭಾರತಿ ಬೋಳಾರ, ಜಯಲಕ್ಷ್ಮಿ,ರಾಘವ,ಕಟ್ಟಡ ಕಾರ್ಮಿಕರ ನಾಯಕರಾದ ದಿನೇಶ್ ಶೆಟ್ಟಿ, ಉಮೇಶ್ ಶಕ್ತಿನಗರ,ದಯಾನಂದ ಕೊಪ್ಪಲಕಾಡು,ಅಶೋಕ್ ಶ್ರೀಯಾನ್,ನಾಗೇಶ್ ಕೋಟ್ಯಾನ್,ಸುರೇಶ್ ಬಜಾಲ್,ಸಾಮಾಜಿಕ ಹೋರಾಟಗಾರರಾದ ಜೆರಾಲ್ಡ್ ಟವರ್,ದಲಿತ ಹಕ್ಕುಗಳ ಸಮಿತಿಯ ತಿಮ್ಮಯ್ಯ ಕೊಂಚಾಡಿ,ಹಮಾಲಿ ಸಂಘಟನೆಯ ಅಹಮ್ಮದ್ ಬಾವ,ಬೀದಿಬದಿ ವ್ಯಾಪಾರಸ್ಥರ ಸಂಘದ ಮುಖಂಡರಾದ ಮಹಮ್ಮದ್ ಮುಸ್ತಾಪಾ, ಶ್ರೀಧರ್,ಅಣ್ಣಯ್ಯ,ವಿಜಯ, ಗುಡ್ಡಪ್ಪ ಮುಂತಾದವರು ಭಾಗವಹಿಸಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

12 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago