Advertisement
City mirror

ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ವಿಧಾನಸೌಧ ಚಲೋ ಬೆಂಬಲಿಸಿ ಪ್ರತಿಭಟನಾ ಪ್ರದರ್ಶನ

Share
ರೈತ ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳ ವಾಪಸಾತಿಗಾಗಿ,ಕಾರ್ಮಿಕರ ಹಕ್ಕುಗಳ ಸಂರಕ್ಷಣೆಗಾಗಿ, ಕೋವಿಡ್ ಸಂಕಷ್ಟದ ಪರಿಹಾರಕ್ಕಾಗಿ,15 ಅಂಶಗಳ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದ ಕಾರ್ಮಿಕ ವರ್ಗ ಹಮ್ಮಿಕೊಂಡಿರುವ ವಿಧಾನಸೌಧ ಚಲೋ ಕಾರ್ಯಕ್ರಮವನ್ನು  ಬೆಂಬಲಿಸಿ, ಸಿಐಟಿಯು ನೇತೃತ್ವದಲ್ಲಿ ಮಂಗಳೂರಿನಲ್ಲಿ  ಮಿನಿ ವಿಧಾನಸೌಧದ ಎದುರು ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದಸಿಐಟಿಯು ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿ , ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಮಿಕ ವರ್ಗದ ಮೇಲೆ ನಡೆಸುತ್ತಿರುವ ಧಾಳಿಗಳನ್ನು ವಿವರಿಸಿದರು.ಕೃಷಿ,ಸಾರ್ವಜನಿಕ ಕ್ಷೇತ್ರ ಮತ್ತು ಸೇವೆಗಳನ್ನು ಕಾರ್ಪೋರೇಟ್ ಕಂಪೆನಿಗಳ ಲಾಭಕೋರತನಕ್ಕೆ ಬದಲಾಯಿಸಲಾಗುತ್ತಿದೆ.ಕೃಷಿ ಮಸೂದೆ ರೈತ ವಿರೋಧಿಕೃಷಿ,ಸಾರ್ವಜನಿಕ ಕ್ಷೇತ್ರ ಮತ್ತು ಸೇವೆಗಳನ್ನು ಕಾರ್ಪೋರೇಟ್ ಕಂಪೆನಿಗಳ ಲಾಭಕೋರತನಕ್ಕೆ ಬದಲಾಯಿಸಲಾಗುತ್ತಿದೆ. ಆದೇಶ, ಸುಗ್ರೀವಾಜ್ಞೆಗಳ ಮೂಲಕ ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸುವುದು,ಅಮಾನತುಗೊಳಿಸುವುದು ಹೆಚ್ಚುತ್ತಿದೆ. ಜನತೆಯ ಹಕ್ಕುಗಳನ್ನು, ಪ್ರತಿಭಟಿಸುವುದನ್ನು ಹತ್ತಿಕ್ಕಲಾಗುತ್ತಿದೆ.ಜನಪರ ಹೋರಾಟಗಾರರ ಮೇಲಿನ ಕೇಸುಗಳು ಹಾಗೂ ಕಿರುಕುಳ ಹೆಚ್ಚುತ್ತಿದೆ. ಒಟ್ಟಿನಲ್ಲಿ ದೇಶ ಸರ್ವಾಧಿಕಾರಿ ನಡೆಯತ್ತ, ಫ್ಯಾಸಿಸ್ಟ್ ಮನೋಭಾವದತ್ತ ಸಾಗುತ್ತಿರುವುದು ಅತ್ಯಂತ ಅಪಾಯಕಾರಿಯಾಗಿದ್ದು,ದೇಶವನ್ನು ಉಳಿಸಲು ಕಾರ್ಮಿಕ ವರ್ಗ ಒಂದಾಗಿ ಹೋರಾಡಬೇಕಾಗಿದೆ ಎಂದು ಹೇಳಿದರು
ಕರ್ನಾಟಕ ಪ್ರಾಂತ ರೈತ ಸಂಘದ ದ.ಕ.ಜಿಲ್ಲಾಧ್ಯಕ್ಷರಾದ ಕೃಷ್ಣಪ್ಪ ಸಾಲ್ಯಾನ್ ಮಾತನಾಡಿದರು. ಪ್ರಾಸ್ತಾವಿಕವಾಗಿ ಸಿಐಟಿಯು  ದಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಮುಖಂಡರಾದ ಯು.ಬಿ.ಲೋಕಯ್ಯ,ಪದ್ಮಾವತಿ ಶೆಟ್ಟಿ, ಗಂಗಯ್ಯ ಅಮೀನ್, ಜಯಂತಿ ಶೆಟ್ಟಿ, ಬಾಬು ದೇವಾಡಿಗ,ಭಾರತಿ ಬೋಳಾರ, ಜಯಲಕ್ಷ್ಮಿ,ರಾಘವ,ಕಟ್ಟಡ ಕಾರ್ಮಿಕರ ನಾಯಕರಾದ ದಿನೇಶ್ ಶೆಟ್ಟಿ, ಉಮೇಶ್ ಶಕ್ತಿನಗರ,ದಯಾನಂದ ಕೊಪ್ಪಲಕಾಡು,ಅಶೋಕ್ ಶ್ರೀಯಾನ್,ನಾಗೇಶ್ ಕೋಟ್ಯಾನ್,ಸುರೇಶ್ ಬಜಾಲ್,ಸಾಮಾಜಿಕ ಹೋರಾಟಗಾರರಾದ ಜೆರಾಲ್ಡ್ ಟವರ್,ದಲಿತ ಹಕ್ಕುಗಳ ಸಮಿತಿಯ ತಿಮ್ಮಯ್ಯ ಕೊಂಚಾಡಿ,ಹಮಾಲಿ ಸಂಘಟನೆಯ ಅಹಮ್ಮದ್ ಬಾವ,ಬೀದಿಬದಿ ವ್ಯಾಪಾರಸ್ಥರ ಸಂಘದ ಮುಖಂಡರಾದ ಮಹಮ್ಮದ್ ಮುಸ್ತಾಪಾ, ಶ್ರೀಧರ್,ಅಣ್ಣಯ್ಯ,ವಿಜಯ, ಗುಡ್ಡಪ್ಪ ಮುಂತಾದವರು ಭಾಗವಹಿಸಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

22 minutes ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

37 minutes ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

16 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago