Advertisement
City mirror

ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ವಿಧಾನಸೌಧ ಚಲೋ ಬೆಂಬಲಿಸಿ ಪ್ರತಿಭಟನಾ ಪ್ರದರ್ಶನ

Share
ರೈತ ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳ ವಾಪಸಾತಿಗಾಗಿ,ಕಾರ್ಮಿಕರ ಹಕ್ಕುಗಳ ಸಂರಕ್ಷಣೆಗಾಗಿ, ಕೋವಿಡ್ ಸಂಕಷ್ಟದ ಪರಿಹಾರಕ್ಕಾಗಿ,15 ಅಂಶಗಳ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದ ಕಾರ್ಮಿಕ ವರ್ಗ ಹಮ್ಮಿಕೊಂಡಿರುವ ವಿಧಾನಸೌಧ ಚಲೋ ಕಾರ್ಯಕ್ರಮವನ್ನು  ಬೆಂಬಲಿಸಿ, ಸಿಐಟಿಯು ನೇತೃತ್ವದಲ್ಲಿ ಮಂಗಳೂರಿನಲ್ಲಿ  ಮಿನಿ ವಿಧಾನಸೌಧದ ಎದುರು ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದಸಿಐಟಿಯು ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿ , ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಮಿಕ ವರ್ಗದ ಮೇಲೆ ನಡೆಸುತ್ತಿರುವ ಧಾಳಿಗಳನ್ನು ವಿವರಿಸಿದರು.ಕೃಷಿ,ಸಾರ್ವಜನಿಕ ಕ್ಷೇತ್ರ ಮತ್ತು ಸೇವೆಗಳನ್ನು ಕಾರ್ಪೋರೇಟ್ ಕಂಪೆನಿಗಳ ಲಾಭಕೋರತನಕ್ಕೆ ಬದಲಾಯಿಸಲಾಗುತ್ತಿದೆ.ಕೃಷಿ ಮಸೂದೆ ರೈತ ವಿರೋಧಿಕೃಷಿ,ಸಾರ್ವಜನಿಕ ಕ್ಷೇತ್ರ ಮತ್ತು ಸೇವೆಗಳನ್ನು ಕಾರ್ಪೋರೇಟ್ ಕಂಪೆನಿಗಳ ಲಾಭಕೋರತನಕ್ಕೆ ಬದಲಾಯಿಸಲಾಗುತ್ತಿದೆ. ಆದೇಶ, ಸುಗ್ರೀವಾಜ್ಞೆಗಳ ಮೂಲಕ ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸುವುದು,ಅಮಾನತುಗೊಳಿಸುವುದು ಹೆಚ್ಚುತ್ತಿದೆ. ಜನತೆಯ ಹಕ್ಕುಗಳನ್ನು, ಪ್ರತಿಭಟಿಸುವುದನ್ನು ಹತ್ತಿಕ್ಕಲಾಗುತ್ತಿದೆ.ಜನಪರ ಹೋರಾಟಗಾರರ ಮೇಲಿನ ಕೇಸುಗಳು ಹಾಗೂ ಕಿರುಕುಳ ಹೆಚ್ಚುತ್ತಿದೆ. ಒಟ್ಟಿನಲ್ಲಿ ದೇಶ ಸರ್ವಾಧಿಕಾರಿ ನಡೆಯತ್ತ, ಫ್ಯಾಸಿಸ್ಟ್ ಮನೋಭಾವದತ್ತ ಸಾಗುತ್ತಿರುವುದು ಅತ್ಯಂತ ಅಪಾಯಕಾರಿಯಾಗಿದ್ದು,ದೇಶವನ್ನು ಉಳಿಸಲು ಕಾರ್ಮಿಕ ವರ್ಗ ಒಂದಾಗಿ ಹೋರಾಡಬೇಕಾಗಿದೆ ಎಂದು ಹೇಳಿದರು
ಕರ್ನಾಟಕ ಪ್ರಾಂತ ರೈತ ಸಂಘದ ದ.ಕ.ಜಿಲ್ಲಾಧ್ಯಕ್ಷರಾದ ಕೃಷ್ಣಪ್ಪ ಸಾಲ್ಯಾನ್ ಮಾತನಾಡಿದರು. ಪ್ರಾಸ್ತಾವಿಕವಾಗಿ ಸಿಐಟಿಯು  ದಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಮುಖಂಡರಾದ ಯು.ಬಿ.ಲೋಕಯ್ಯ,ಪದ್ಮಾವತಿ ಶೆಟ್ಟಿ, ಗಂಗಯ್ಯ ಅಮೀನ್, ಜಯಂತಿ ಶೆಟ್ಟಿ, ಬಾಬು ದೇವಾಡಿಗ,ಭಾರತಿ ಬೋಳಾರ, ಜಯಲಕ್ಷ್ಮಿ,ರಾಘವ,ಕಟ್ಟಡ ಕಾರ್ಮಿಕರ ನಾಯಕರಾದ ದಿನೇಶ್ ಶೆಟ್ಟಿ, ಉಮೇಶ್ ಶಕ್ತಿನಗರ,ದಯಾನಂದ ಕೊಪ್ಪಲಕಾಡು,ಅಶೋಕ್ ಶ್ರೀಯಾನ್,ನಾಗೇಶ್ ಕೋಟ್ಯಾನ್,ಸುರೇಶ್ ಬಜಾಲ್,ಸಾಮಾಜಿಕ ಹೋರಾಟಗಾರರಾದ ಜೆರಾಲ್ಡ್ ಟವರ್,ದಲಿತ ಹಕ್ಕುಗಳ ಸಮಿತಿಯ ತಿಮ್ಮಯ್ಯ ಕೊಂಚಾಡಿ,ಹಮಾಲಿ ಸಂಘಟನೆಯ ಅಹಮ್ಮದ್ ಬಾವ,ಬೀದಿಬದಿ ವ್ಯಾಪಾರಸ್ಥರ ಸಂಘದ ಮುಖಂಡರಾದ ಮಹಮ್ಮದ್ ಮುಸ್ತಾಪಾ, ಶ್ರೀಧರ್,ಅಣ್ಣಯ್ಯ,ವಿಜಯ, ಗುಡ್ಡಪ್ಪ ಮುಂತಾದವರು ಭಾಗವಹಿಸಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

12 minutes ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

14 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

18 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago