ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಇದರಲ್ಲಿ 89 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 12 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ಗುರುತಿಸಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಮಾಗಡಿ ಹಾಗೂ ರಾಮನಗರ ತಾಲ್ಲೂಕುಗಳು ತೀವ್ರ ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರ್ಪಡೆಯಾಗಿವೆ.
ಜಿಲ್ಲೆಯ ಚನ್ನಪಟ್ಟಣ, ಹಾರೋಹಳ್ಳಿ ಹಾಗೂ ಕನಕಪುರ ತಾಲ್ಲೂಕುಗಳಲ್ಲೂ ವಾಡಿಕೆಯಷ್ಟು ಮಳೆಯಾಗದ ಹಿನ್ನೆಲೆಯಲ್ಲಿ ಮುಂದಿನ ಹಂತದಲ್ಲಿ ಬರಪೀಡಿತ ತಾಲ್ಲೂಕುಗಳಾಗಿ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಡಿಯುವ ನೀರು, ಮೇವು ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ : ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತೀವ್ರಗೊಂಡರೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಬಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕುಡಿಯುವ ನೀರು ಮತ್ತು ಬರ ಪರಿಸ್ಥಿತಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಮಾನದಂಡಗಳ ಅನ್ವಯ ರಾಜ್ಯ ಸರ್ಕಾರ ಹಂತ ಹಂತವಾಗಿ ಬರಪೀಡಿತ ತಾಲ್ಲೂಕುಗಳನ್ನು ಘೋಷಣೆ ಮಾಡಲಿದೆ. ಮೊದಲ ಹಂತದಲ್ಲಿ ಮಾಗಡಿ ಹಾಗೂ ರಾಮನಗರ ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿವೆ ಎಂದು ಸಚಿವರು ತಿಳಿಸಿದರು.
ಹಲವು ಇಲಾಖೆಗಳು ಒಟ್ಟಾಗಿ ಕೆಲಸ ಮಾಡಲು ಸೂಚನೆ : ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಕಂದಾಯ, ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದರು.
ಮಳೆ ಕೊರತೆಯ ಪರಿಣಾಮ ಕೃಷಿ ಚಟುವಟಿಕೆಗಳ ಜೊತೆಗೆ ಜಾನುವಾರು ಸಾಕಾಣಿಕೆ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ನೀರು, ಮೇವು ಮತ್ತು ಇತರ ಅಗತ್ಯ ಸೌಲಭ್ಯಗಳ ಲಭ್ಯತೆಯನ್ನು ಮುಂಚಿತವಾಗಿ ಖಚಿತಪಡಿಸಿಕೊಳ್ಳುವುದು ಅಗತ್ಯವಾಗಿದೆ.
Karnataka has declared 101 taluks as drought-affected, including 89 severely drought-affected and 12 moderately drought-affected taluks. In Bengaluru South district, Magadi and Ramanagara have been declared severely drought-affected, while Channapatna, Harohalli and Kanakapura may be included in the next phase due to deficient rainfall. Minister H.C. Balakrishna has directed officials to ensure adequate drinking water and fodder and coordinate across departments to manage the situation.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…