ಬಿಟ್ಟಿಯಾಗಿ ಸಿಗುತ್ತೆ ಅಂದ್ರೆ ಎಲ್ಲರಿಗೂ ಬೇಕು. ಆದರೆ ಬಡವರ ಹೊಟ್ಟೆ ಮೇಲೆ ಹೊಡೆದು ಜನರ ತೆರಿಗೆ ಹಣಕ್ಕೆ ವಂಚನೆ ಮಾಡೋದು ಅಂದ್ರೆ ಅದು ನಿಜಕ್ಕೂ ನಾಚಿಗೇಡಿನ ಸಂಗತಿ. ಈ ರೀತಿ ಮೋಸ ಮಾಡಿ, ಸರ್ಕಾರಕ್ಕೆ ವಂಚಿಸುತ್ತಿರುವುದು ಬೇರಾರು ಅಲ್ಲ ಸರ್ಕಾರಿ ನೌಕರಿಯಲ್ಲಿದ್ದ ನೌಕರರು….!
ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು 4.6 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಂದ 13.5 ಕೋಟಿ ರೂಪಾಯಿ ದಂಡವನ್ನು ಸಂಗ್ರಹಿಸಿದೆ. ವಿಪರ್ಯಾಸವೆಂದರೆ 21,232 ಸರ್ಕಾರಿ ನೌಕರರೇ ಬಿಪಿಎಲ್ ಕಾರ್ಡ್ ಪಡೆದಿದ್ದರು ಎಂಬುದು ಬೆಳಕಿಗೆ ಬಂದಿದ್ದು, ಅವರಿಂದ 11.2 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ. ನಕಲಿ ಬಿಪಿಎಲ್ ಕಾರ್ಡ್ ಹೊಂದಿರುವವರ ವಿರುದ್ಧ 2021ರ ಫೆಬ್ರವರಿ ತಿಂಗಳಿನಿಂದಲೇ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಈಗಲೂ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಆಧಾರ್ ಸಂಖ್ಯೆಗಳನ್ನು ಬಳಸಿಕೊಂಡು ವಿವಿಧ ಇಲಾಖೆಗಳಿಂದ ಅಂತಹ ಅನರ್ಹ ಫಲಾನುಭವಿಗಳ ಡೇಟಾವನ್ನು ಸಂಗ್ರಹಿಸಲಾಗುತ್ತಿದೆ ಎಂದು ಹೆಚ್ಚುವರಿ ನಿರ್ದೇಶಕ (ವಿಜಿಲೆನ್ಸ್ ಮತ್ತು ಸಾರ್ವಜನಿಕ ವಿತರಣೆ) ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮಾಹಿತಿ ನೀಡಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…