ಇಂಧನ ಇಲಾಖೆಯಿಂದ ರಾಜ್ಯದಲ್ಲಿ ಮುಂದಿನ 4 ವರ್ಷಗಳಲ್ಲಿ ಒಟ್ಟು 440 ಹೊಸ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಯ ಗುರಿ ಹೊಂದಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸರ್ಕಾರದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಹಲವೆಡೆ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಚಾಲನೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಡ ಈ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯ ಕಡೂರು ತಾಲೂಕು ಚೌಳಹಿರಿಯೂರು, ಕೆ.ಬಸವನಹಳ್ಳಿಯಲ್ಲಿ ನೂತನ ವಿದ್ಯುತ್ ಉಪ ಕೇಂದ್ರ ಸ್ಥಾಪನೆಗೆ ಆದೇಶ ನೀಡಲಾಗಿದೆ ಎಂದರು. ಜಿಲ್ಲೆಯಲ್ಲಿನ ಹಾಲಿ ವಿದ್ಯುತ್ ಉಪ ಕೇಂದ್ರಗಳಲ್ಲಿ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ಪರಿವರ್ತಕಗಳ ಸಾಮರ್ಥ್ಯ ಹೆಚ್ಚಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…