Advertisement
ರಾಜ್ಯ

ಅಡಿಕೆ ಆಮದು ರದ್ದು ಮಾಡಿ | ಗುಣಮಟ್ಟದ ಅಡಿಕೆ ಇರುವಾಗ ಕಳಪೆ ಅಡಿಕೆ ಏಕೆ ? | ರಾಜ್ಯದ ಅಡಿಕೆ-ಕಾಳುಮೆಣಸು ಬೆಳೆಗಾರರನ್ನು ರಕ್ಷಿಸಿ | ಆಮ್‌ ಆದ್ಮಿ ಪಾರ್ಟಿ ಒತ್ತಾಯ |

Share

ಈ ದೇಶದಲ್ಲಿ ಗುಣಮಟ್ಟದ ಅಡಿಕೆ ಇರುವಾಗ ಕಳಪೆ ಗುಣಮಟ್ಟದ ಅಡಿಕೆ ಆಮದು ಏಕೆ ಮಾಡಿಕೊಳ್ಳಬೇಕು?. ಈ ರಾಜ್ಯದಲ್ಲಿ ಸಾಕಷ್ಟು ಅಡಿಕೆ ಬೆಳೆಯಲಾಗುತ್ತದೆ. ಹೀಗಿರುವಾಗ ಅಡಿಕೆ ಆಮದು ಅನಿವಾರ್ಯ ಏಕೆ ?. ಮೊದಲು ಈ ದೇಶದ ಕೃಷಿಕರ ರಕ್ಷಣೆಯಾಗಲಿ, ಆಮದು ನಿಯಮಗಳಿಂದ ಕರ್ನಾಟಕದ ಅಡಿಕೆ ಮತ್ತು ಕಾಳುಮೆಣಸು ಬೆಳಗಾರರಿಗೆ ಸಂಕಷ್ಟ ಎದುರಾಗಲಿದೆ ಎಂದು ಆಮ್‌ ಆದ್ಮಿ ಪಕ್ಷ  ಎಚ್ಚರಿಸಿದೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಆಮ್‌ ಆದ್ಮಿ ಪಕ್ಷದ ಮುಖಂಡ ಬ್ರಿಜೇಶ್‌ ಕಾಳಪ್ಪ, ಅಡಿಕೆ, ಕಾಳುಮೆಣಸು ಹಾಗೂ ಶುಂಠಿ ಮೊದಲಾದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರಿಂದ ದೇಶದ ಕೃಷಿಕರು ಸಂಕಷ್ಟಕ್ಕೆ ಒಳಗಾಗಲಿದ್ದಾರೆ.ರಾಜ್ಯದ ಅಡಿಕೆ ಬೆಳೆಗಾರರ ಭವಿಷ್ಯದ ಜೊತೆ ಸರ್ಕಾರವು ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಹಾಗೂ ಕೇರಳ ಮತ್ತು ಇನ್ನಿತರ ರಾಜ್ಯಗಳಲ್ಲಿ ಸಾಕಷ್ಟು ಅಡಿಕೆಯನ್ನು ಬೆಳೆಯಲಾಗುತ್ತಿದೆ. ಕಾಳುಮೆಣಸು, ಶುಂಠಿಯನ್ನು ಕೂಡಾ ಬೆಳೆಯಲಾಗುತ್ತಿದೆ. ಹಾಗಿದ್ದರೂ ಆಮದು ಅಗತ್ಯ ಇಲ್ಲ. ದೇಶದ ರೈತರ ಆದಾಯ ದ್ವಿಗುಣ ಮಾಡುವ ನೀತಿ ಹೊಂದಿರುವ ಕೇಂದ್ರ ಸರ್ಕಾರವು, ಭಾರತಕ್ಕೆ ಅಗತ್ಯವಿರುವಷ್ಟು ಅಡಿಕೆ ಹಾಗೂ ಕಾಳುಮೆಣಸನ್ನು ನಮ್ಮ ರೈತರೇ ಉತ್ಪಾದಿಸುವಾಗ ಆಮದು ಮಾಡಿಕೊಳ್ಳುವ ಅಗತ್ಯವೇನಿದೆ . ಈಗ ಆಮದು ನೀತಿಯ ಮೂಲಕ ರೈತರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ. ಹೀಗಾಗಿ ತಕ್ಷಣವೇ ಆಮದು ರದ್ದು ಪಡಿಸಬೇಕು ಎಂದು ಆಮ್‌ ಆದ್ಮಿ ಪಕ್ಷ ಒತ್ತಾಯಿಸುತ್ತದೆ ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

ರಾಜ್ಯದಲ್ಲಿ  ಗುಣಮಟ್ಟದ ಅಡಿಕೆ ಹಾಗೂ ಕಾಳುಮೆಣಸು ಬೆಳೆಯುತ್ತಿದೆ. ಕೇಂದ್ರ ಸರ್ಕಾರವು ಭೂತಾನ್‌ನಿಂದ ಅಡಿಕೆಯನ್ನು ಹಾಗೂ ವಿಯೆಟ್ನಾಂನಿಂದ ಶ್ರೀಲಂಕಾ ಮೂಲಕ ಕಾಳುಮೆಣಸು ಅನ್ನು ಆಮದು ಮಾಡಿಕೊಳ್ಳಲು ಅವಕಾಶ ನೀಡಲು ನಿರ್ಧರಿಸಿದೆ.  ಕೇಂದ್ರ ಸರ್ಕಾರ ಆಮದು ಮಾಡಿಕೊಳ್ಳಲು ನಿರ್ಧರಿಸಿರುವ ಅಡಿಕೆ, ಮೆಣಸು ಕಡಿಮೆ ಗುಣಮಟ್ಟದ್ದಾಗಿವೆ. ಇಲ್ಲಿನ ಉತ್ತಮ ಗುಣಮಟ್ಟದ ಬೆಳೆಗಳೊಂದಿಗೆ ಮಿಶ್ರವಾಗುವುದರಿಂದ ಸ್ವದೇಶಿ ಅಡಿಕೆ ಹಾಗೂ ಕಾಳುಮೆಣಸಿನ ಬಗ್ಗೆ ಗ್ರಾಹಕರಲ್ಲಿ ತಪ್ಪು ಕಲ್ಪನೆ ಮೂಡಲಿದೆ ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

ಆಮದು ವೇಳೆ ಕಾನೂನು ಉಲ್ಲಂಘನೆ ಈಗಾಗಲೇ ಅಡಿಕೆ ಹಾಗೂ ಕಾಳುಮೆಣಸು ಆಮದಿಗೆ ಸಂಬಂಧಿಸಿ ಪ್ರಭಾವಿಗಳಿಂದ ಸಫೆಮಾ, ಫೆರಾ ಮುಂತಾದ ಕಾನೂನುಗಳ ಉಲ್ಲಂಘನೆಯಾಗಿರುವುದು ಕಂಡು ಬರುತ್ತಿದೆ, ಈ ಬಗ್ಗೆಯೂ  ತನಿಖೆಯಾಗಬೇಕು ಎಂಬುದು ಆಮ್‌ ಆದ್ಮಿ ಪಾರ್ಟಿಯ ಆಗ್ರಹವಾಗಿದೆ ಎಂದು ಹೇಳಿದರು.

ಸರ್ಕಾರವು ಅಡಿಕೆ ಮತ್ತು ಕಾಳುಮೆಣಸನ್ನು ಆಮದು ಮಾಡಿಕೊಂಡರೆ ಅವುಗಳ ಮೇಲೆ ಭಾರೀ ಆಮದು ಸುಂಕವನ್ನು ವಿಧಿಸಬೇಕು. ಭಾರತೀಯ ರೈತರನ್ನು ರಕ್ಷಿಸಲು ಪರಿಣಾಮಕಾರಿ ಆಮದು ಸುಂಕ ನೀತಿಯ  ಬಳಸಿಕೊಂಡು ಆಮದುದಾರರಿಗೆ ಅವಕಾಶ ನೀಡಬಾರದು.ಸರ್ಕಾರಕ್ಕೆ ರೈತರ ಹಿತ ಕಪಾಡಲು ಮನಸ್ಸಿದ್ದರೆ ಈಗಲೂ ಇಂತಹ ಅವಕಾಶ ಇದೆ ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

ಎಎಪಿಯ ಬೆಂಗಳೂರು ನಗರ ಮಾಧ್ಯಮ ವಕ್ತಾರ ಉಷಾ ಮೋಹನ್‌, ಬೆಂಗಳೂರು ನಗರ ಎಎಪಿ ಉಪಾಧ್ಯಕ್ಷ ಬಿಟಿ ನಾಗಣ್ಣ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

57 minutes ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

2 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

1 day ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

3 days ago